NEWSಕೃಷಿನಮ್ಮಜಿಲ್ಲೆ

ತಿ.ನರಸೀಪುರ: ಬೇಜವಾಬ್ದಾರಿ ನೀರಾವರಿ ಸಚಿವರ ಬದಲಾಯಿಸಿ, ಕಾವೇರಿ ಅವಾಂತರ ತಪ್ಪಿಸಿ- ಪ್ರತಿಭಟನಾ ನಿರತ ರೈತರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬೇಜವಾಬ್ದಾರಿ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಖಾತೆ ಬದಲಾಯಿಸಿ ಕಾವೇರಿ ಅವಾಂತರ ತಪ್ಪಿಸಿ ಎಂದು ಪಟ್ಟದ ರಸ್ತೆಯಲ್ಲಿ ರೈತರು ಮಾನವ ಸರ್ಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಬುಧವಾರ ಸೆ.20ರಂದು ತಿ.ನರಸಿಪುರದಲ್ಲಿ ಕಬಿನಿ ಕಾವೇರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದರು. ಕಬಿನಿಯಿಂದ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಇನ್ನು ವಚನಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ, ನೀರಾವರಿ ಸಚಿವರನ್ನು ಬದಲಾಯಿಸಬೇಕು. ರೈತ ದ್ರೋಹಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು.

ಈ ಮೆರವಣಿಗೆ ನೇತೃತ್ವ ವಹಿಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕಬಿನಿ ಅಚ್ಚುಕಟ್ಟು ಭಾಗದ ರೈತರ ಬೆಳೆಗೆ ಭತ್ತ ಬೆಳೆಯಲು ನೀರು ಕೊಡದೆ ತಮಿಳುನಾಡಿಗೆ ಹರಿಸಿ ರೈತರ ಬಲಿ ಪಡೆದ ರಾಜ್ಯ ಸರ್ಕಾರ ಕೂಡಲೇ ಎಕ್ಕರೆಗೆ 25,000 ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಜತೆ ನಿಕಟ ಬಾಂಧವ್ಯದ ನೀರಿನ ವ್ಯಾಪಾರ ಮಾಡುವ ನೀರಾವರಿ ಸಚಿವ ಶಿವಕುಮಾರ್ ಅವರ ಸಚಿವ ಖಾತೆಯನ್ನು ಕೂಡಲೇ ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಒತ್ತಡದ ಕಾರಣ ರೈತರು, ಜನಸಾಮಾನ್ಯರು ತೊಂದರೆಗೆ ಸಿಲುಕುತ್ತಿದ್ದಾರೆ, ಆದ್ದರಿಂದ ಕಾವೇರಿ ನೀರು ಪ್ರಾಧಿಕಾರ ಹಾಗೂ ನೀರು ನಿರ್ವಹಣ ಪ್ರಾಧಿಕಾರ ಸ್ವತಂತ್ರ ಸಂಸ್ಥೆಗಳಾಗಿ ಕಾರ್ಯನಿರ್ವಹಿಸಬೇಕು. ವಿಶೇಷ ನೀತಿ ನಿಯಮಗಳ ರಚಿಸಬೇಕು, ಈ ಪ್ರಾಧಿಕಾರಕ್ಕೆ ಕಾವೇರಿ ಅಚ್ಚುಕಟ್ಟು ಭಾಗದ ಎಲ್ಲ ರಾಜ್ಯಗಳ ಪರಿಣಿತರು ವಿಷಯ ಪರಿಣಿತರು ರೈತರು ಒಳಗೊಂಡಂತೆ ರಚನೆ ಆಗಬೇಕು ಎಂದರು.

ಪ್ರತಿಭಟನೆಗೂ ಮೊದಲು ನಡೆದ ಸಭೆಯಲ್ಲಿ ಮುಖಂಡರಾದ ಕೆ.ಎನ್. ಪ್ರಭುಸ್ವಾಮಿ , ಬನ್ನಳ್ಳಿಹುಂಡಿ ಸೋಮಣ್ಣ, ಕಿರಗಸೂರು ಶಂಕರ್, ಕುರುಬೂರು ಸಿದ್ದೇಶ ಪ್ರಸಾದ್ ನಾಯಕ್ ಅಪ್ಪಣ್ಣ ಸಿದ್ದರಾಜು ಪರಶಿವಮೂರ್ತಿ ಮಾತನಾಡಿದರು ಸಭೆಯಲ್ಲಿ ಪ್ರದೀಪ್ ಬೆಳಕು ಸಂಸ್ಥೆಯ ಅರವಿಂದ ಚಂದ್ರಶೇಖರ್ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು