NEWSನಮ್ಮಜಿಲ್ಲೆ

ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ತೂಬಗೆರೆ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಅಧ್ಯಕ್ಷರ ಸ್ಥಾನಕ್ಕೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಮುನಿಲಕ್ಷಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಮ್ಮ ರಾಜಕುಮಾರ್ ಹಾಗೂ ಕೆ.ಗೀತಾ ಇಬ್ಬರು ನಾಮಪತ್ರಗಳು ಸಲ್ಲಿಸಿದ್ದರು, ಕೊನೆ ಕ್ಷಣದಲ್ಲಿ ಕೆ.ಗೀತಾ ನಾಮಪತ್ರ ವಾಪಸ್ ಪಡೆದಿರುವುದರಿಂದ ಮಂಜುಳಮ್ಮ ರಾಜಕುಮಾರ್ ಅವರನ್ನು ಅವಿರೋಧವಾಗಿ ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕಿ ಗಿರಿಜಾಂಬ ಹೇಳಿದ್ದಾರೆ.

ಇನ್ನು ಆಯ್ಕೆಯಾದ ನೂತನ ಅಧ್ಯಕ್ಷೆ ಮಾತನಾಡಿ, ಗ್ರಾಮ ಪಂಚಾಯಿತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುತ್, ಚರಂಡಿ ಬೀದಿ ದೀಪಗಳನ್ನು ಎಲ್ಲ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸುತ್ತೇನೆ ಹಾಗೂ ಊರಿನ ಸ್ವಚ್ಛತೆ ಬಗ್ಗೆಯೂ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಎಸ್.ಅರ್. ಮುನಿರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ವಿ.ವೆಂಕಟೇಶ್, ನಂಜಮ್ಮ, ನರಸಿಂಹಮೂರ್ತಿ, ಸದಸ್ಯರಾದ ಮುನಿಕೃಷ್ಣಪ್ಪ, ನರಸಿಂಹಮೂರ್ತಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಲೆಕ್ಕ ಸಹಾಯಕರು ವೆಂಕಟೇಶ್, ಕಾರ್ಯದರ್ಶಿ ಸಂಜಯ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು