NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ… ಬರಿದಾಗುತ್ತಿದೆ ಕೆಆರ್‌ಎಸ್ ಒಡಲು…

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಾವೇರಿ ಒಡಲು ಬರಿದಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಈ ಪ್ರತಿಭಟನೆಗಳ ನಡುವೆಯೇ ಕಾವೇರಿ ನೀರು ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ತಮಿಳುನಾಡಿಗೆ ಸುಮಾರು 6,716 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ.

ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಇಂದು (ಸೋಮವಾರ ಸೆ.25) ಹೊರ ಹೋಗುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಇದು ಹೀಗೆಯೇ ಮುಂದುವರಿದರೆ ಇನ್ನು ಕೆಲವೇ ದಿನಗಳಲ್ಲಿ ಕಾವೇರಿ ಕೊಳ್ಳದ ಹೇಮಾವತಿ, ಹಾರಂಗಿ ಮತ್ತು ಕೆಆರ್‌ಎಸ್ ಜಲಾಶಯಗಳು ಖಾಲಿಯಾಗುವುದರಲ್ಲಿ ಅನ್ಯ ಮಾತಿಲ್ಲ.

ಸಾಮಾನ್ಯವಾಗಿ ಈ ದದಿನಗಳಲ್ಲಿ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿತ್ತು. ಹಾಗಾಗಿ ನೀರು ಜಲಾಶಯಗಳಿಗೆ ಹರಿದು ಬರುತ್ತಿತ್ತು. ಆದರೆ ಈ ಬಾರಿ ಈ ದಿನಗಳಲ್ಲಿ ಮಳೆ ಎಲ್ಲ ಕಡೆ ಸುರಿಯುತ್ತಿಲ್ಲ. ಆದ್ದರಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಹೋದರೆ ಜಲಾಶಯ ಖಾಲಿಯಾಗುವುದು ಖಚಿತ. ಸದ್ಯ ತಮಿಳುನಾಡಿಗೆ ಕೆಆರ್‌ಎಸ್‌ನಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರೆ, ಕಬಿನಿ ಜಲಾಶಯದಿಂದ 2,500 ಕ್ಯೂಸೆಕ್, ನೀರನ್ನು ಬಿಡಲಾಗಿದೆ. ಒಟ್ಟಾರೆ ತಮಿಳುನಾಡಿಗೆ 6,605 ಕ್ಯೂಸೆಕ್ ನೀರು ಸದ್ಯ ಹರಿದು ಹೋಗುತ್ತಿದೆ.

ಇನ್ನು ಕಳೆದ ಎರಡು ದಿನಗಳಲ್ಲಿ ಎಷ್ಟು ನೀರನ್ನು ಕೆಆರ್‌ಎಸ್ ನಿಂದ ಬಿಡಲಾಗಿತ್ತು ಎಂಬುದನ್ನು ನೋಡುತ್ತಾ ಹೋದರೆ. ನಿನ್ನೆ ಶನಿವಾರ 2,973 ಕ್ಯುಸೆಕ್, ಭಾನುವಾರ 3,838 ಕ್ಯುಸೆಕ್ ನೀರನ್ನು ಬಿಡಲಾಗಿತ್ತು. ಆದರೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಳೇ ಮೈಸೂರು ವ್ಯಾಪ್ತಿಯಲ್ಲಿ ಪ್ರತಿಭಟನೆ ತೀವ್ರವಾದ ಬಳಿಕವೂ ಹರಿದು ಹೋಗುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗದೆ ಹೆಚ್ಚಾಗುತ್ತಿರುವುದು ಕಾವೇರಿ ಕೊಳ್ಳದ ರೈತರು ಮತ್ತು ಜನರನ್ನು ಆತಂಕಕ್ಕೆ ತಳ್ಳಿದೆ.

ಇನ್ನು ಗರಿಷ್ಠ 124.80 ಅಡಿಗಳ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ 96.70 ಅಡಿಗಳಷ್ಟು ನೀರಿದೆ. ಜಲಾಶಯ ಭರ್ತಿಯಾದರೆ 49.452 ಟಿಎಂಸಿ ನೀರು ಸಂಗ್ರವಾಗುತ್ತದೆ. ಆದರೆ ಈಗ ಇರುವ ನೀರಿನ ಪ್ರಮಾಣ 20.334 ಟಿಎಂಸಿ ಮಾತ್ರ. ಜಲಾಶಯಕ್ಕೆ ನದಿಯ ಮೂಲಕ 5,993 ಕ್ಯೂಸೆಕ್ ನೀರು ಹರಿದು ಬರುತ್ತಿದ್ದರೆ, 6,716 ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ. ಕೊಡಗು ವ್ಯಾಪ್ತಿಯಲ್ಲಿ ಸ್ವಲ್ಪ ಮಳೆಯಾಗುತ್ತಿರುವುದರಿಂದ ಸುಮಾರು ಐದು ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಆದರೆ ಅಲ್ಲಿ ಮಳೆ ಬಾರದೆ ಹೋದರೆ ಒಳ ಹರಿವಿನ ಪ್ರಮಾಣ ಕುಸಿಯಲಿದೆ.

ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಮುಂದಿನ ಮುಂಗಾರು ತನಕ ಕುಡಿಯುವ ನೀರನ್ನೂ ಒದಗಿಸುವುದೇ ಕಷ್ಟವಾಗಲಿದೆ. ದಿನ ಕಳೆದಂತೆ ಸೂರ್ಯನ ಪ್ರಖರತೆ ಹೆಚ್ಚುತ್ತಾ ಹೋದರೆ ಜಲಾಶಯದ ನೀರು ಆವಿಯಾಗಿ ಒಂದಷ್ಟು ನೀರಿನ ಪ್ರಮಾಣ ಕುಸಿತವಾಗಲಿದೆ. ಒಟ್ಟಾರೆ ಕಾನೂನಾತ್ಮಕವಾಗಿ ಸಂಕಷ್ಟ ಸೂತ್ರವನ್ನು ಕಂಡು ಹಿಡಿಯದೆ ಹೋದರೆ ಮುಂದಿನ ದಿನಗಳು ಸಂಕಷ್ಟದ ದಿನಗಳಾಗಿರುವುದರಲ್ಲಿ ಎರಡು ಮಾತಿಲ್ಲ. – LK

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು