ನಮ್ಮಜಿಲ್ಲೆಶಿಕ್ಷಣ-

ದ್ವಿತೀಯ ಪಿಯುಸಿ ಪರೀಕ್ಷೆಗೆ 118 ವಿದ್ಯಾರ್ಥಿಗಳು ಗೈರು

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯು ಕನ್ನಡ ಪರೀಕ್ಷೆಗೆ 8,954 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 8836 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 118 ಮಂದಿ ಗೈರಾಗಿದ್ದಾರೆ ಎಂದು ಪಿಯು ಇಲಾಖೆಯ ಉಪ ನಿದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ವಾರದ ಸಂತೆ, ಜಾತ್ರೆ,  ಸಾಮೂಹಿಕ ವಿವಾಹಕ್ಕೆ ತಡೆ

ಸರ್ಕಾರದ ಆದೇಶದಂತೆ, ಉಡುಪಿ ಜಿಲ್ಲಾಧಿಕಾರಿಗಳ ಮಾ.18 ರ ಆದೇಶದಲ್ಲಿ ತಿಳಿಸಿರುವಂತೆ, ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು, ಜನಸಂದಣಿ ಸೇರುವ ಕಾರ್ಯಗಳಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವ ಕಾರಣದಿಂದ ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ  ಆರೋಗ್ಯದ  ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ, ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರದ ಸಂತೆ, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ  ಆನಂದ ಕಲ್ಲೋಳಿಕರ್ ತಿಳಿಸಿದ್ದಾರೆ.

ಉಡುಪಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ

ಕೊರೊನಾ ವೈರಸ್ ಭೀತಿ ಹಿನ್ನೆಲೆ ರೈಲ್ವೆ ಇಲಾಖೆ ವತಿಯಿಂದ,  ಉಡುಪಿ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ತಪಾಸಣಾ ಮತ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಪ್ರಯಾಣಿಕರ ಪರೀಕ್ಷೆ ನಡೆಸಲಾಯಿತು.

ರೋಗಿ ಗುಣಮುಖ- ವಾರಸುದಾರರಿಗೆ ಸೂಚನೆ

ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ ವಿಠ್ಠಲ್ ನಾಯಕ್ (70) ಎಂಬ ವ್ಯಕ್ತಿಯು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಆಸ್ಪತ್ರೆಯಿಂದ ಕರೆದುಕೊಂಡು ಹೋಗಲು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ತಿಳಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!