NEWSದೇಶ-ವಿದೇಶರಾಜಕೀಯ

ದೆಹಲಿಯಲ್ಲಿ ಬೀಡು ಬಿಟ್ಟ ಕರ್ನಾಟಕದ ಕೈ ನಾಯಕರಿಗೆ ಬಿಗ್‌ಶಾಕ್‌ಕೊಟ್ಟ ಸೋನಿಯಾ ಮೇಡಂ!

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ಅವರು ಸಿಮ್ಲಾದಲ್ಲಿದ್ದು, ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಬಂದ ಮಾಹಿತಿ ಪ್ರಕಾರ ಅವರು ಮೇ 20ವರೆಗೂ ಸಿಮ್ಲಾದಲ್ಲೇ ಇರಲಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಅವರೊಂದಿಗೆ ಮಾತನಾಡಬೇಕು ಎಂದು ದೆಹಲಿಯಲ್ಲಿ ಬೀಡುಬಿಟ್ಟಿರುವ ರಾಜ್ಯದ ಕೈ ನಾಯಕರ ಭೇಟಿ ಮಾಡುವ ಸಾಧ್ಯತೆ ತೀರ ಕಡಿಮೆ ಇದೆ. ಹೀಗಾಗಿ ದೆಹಲಿಯಲ್ಲಿ ಬೀಡುಬಿಟ್ಟವರಿಗೆ ಬಿಗ್‌ಶಾಕ್‌ ನೀಡಿದ್ದಾರೆ ಸೋನಿಯಾಗಾಂಧಿ ಎಂದೇ ಹೇಳಲಾಗುತ್ತಿದೆ.

ಈ ನಡುವೆ ಅವರು ಇಂದು ದೆಹಲಿಗೆ ಆಗಮಿಸದಿದ್ದರೆ ಸಿಎಂ ಸ್ಥಾನದ ಆಕಾಂಕ್ಷಿಗಳ ಮುಂದಿನ ನಡೆಯೇನು ಎಂಬ ಲೆಕ್ಕಾಚಾರವು ನಡೆಯುತ್ತಿದೆ. ಆದರೆ, ಸೋನಿಯಾಗಾಂಧಿ ಕಾಂಗ್ರೆಸ್‌ ಅಧಿನಾಯಕಿಯಾಗಿದ್ದಾರೆ, ಅವರು ಪಕ್ಷದಲ್ಲಿ ಯಾವುದೇ ಹುದ್ದೆ ಹೊಂದಿಲ್ಲ.

ಹೀಗಾಗಿ ಸಿಎಂ ಯಾರಾಗಬೇಕು ಎಂಬುದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ತೆಗೆದುಕೊಂಡು ಇವರೆ ಕರ್ನಾಟಕದ ಸಿಎಂ ಎಂದು ಘೋಷಣೆ ಮಾಡಬಹುದು. ಆ ಅಧಿಕಾರ ಖರ್ಗೆ ಅವರಿಗೆ ಇದೆ.

ಇನ್ನು ಈ ಎಲ್ಲವನ್ನು ಗಮನಿಸಿದರೆ ಸೋನಿಯಾಗಾಂಧಿ ಅವರು ಖರ್ಗೆ ಅವರಿಗೆ ಇಂಥವರನ್ನೇ ಸಿಎಂ ಎಂದು ನೀವು ಘೋಷಣೆ ಮಾಡಿ ಎಂದು ಹೇಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾಗಿ ಇಂದು ಸಂಜೆ ವೇಳೆಗೆ ಎಲ್ಲವನ್ನು ಅಳೆದು ತೂಗಿ ಸಿಎಂ ಅಭ್ಯರ್ಥಿ ಯಾರು ಎಂದು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು