NEWSನಮ್ಮರಾಜ್ಯಸಿನಿಪಥ

ನ.29ರಂದು ಉದ್ಯಮಿ ವಿಜಯ್ ಜೊತೆ ನಟಿ ಪೂಜಾ ಗಾಂಧಿ ಮಂತ್ರ ಮಾಂಗಲ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಗಾರು ಮಳೆ ಸಿನಿಮಾ ಮೂಲಕ ಅಭಿಮಾನಿಗಳಿಗೆ ಚಿರಪರಿಚಿತರಾದ ನಟಿ ಪೂಜಾ ಗಾಂಧಿ ನಾಳೆ ಅಂದರೆ ನ.29ರಂದು (ಮಂತ್ರ ಮಾಂಗಲ್ಯ) ಸರಳ ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರು ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲವಾದರೂ, ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಭಾರಿ ಸರಳವಾಗಿ ಮದುವೆ ಆಗುತ್ತಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ಮದುವೆಗೆ ಸಿದ್ಧತೆ ನಡೆದಿದ್ದು, ಉದ್ಯಮಿ ಹಾಗೂ ಇವರಿಗೆ ಕನ್ನಡ ಕಲಿಸಿಕೊಟ್ಟ ವಿಜಯ್ ಘೋರ್ಪಡೆ ಎಂಬುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಬಂಗಾಳಿ ಮೂಲದ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.

ಅಂದಹಾಗೆ ನಟಿ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದು ವಿಜಯ್ ಅವರೇ. ಬಂಗಾಳಿ ಮೂಲದವರಾದ ಪೂಜಾ ಗಾಂಧಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುವಾಗ ಕನ್ನಡ ಬರುತ್ತಿರಲಿಲ್ಲ. ಆ ಬಳಿಕ ವಿಜಯ್ ಸಹಾಯ ಪಡೆದುಕೊಂಡಿದ್ದರಂತೆ. ಇದೀಗ ಅಚ್ಚ ಕನ್ನಡವನ್ನು ಸ್ವಚ್ಛವಾಗಿ ಮಾತನಾಡುತ್ತಿರುವ ಪೂಜಾ, ಸಿನಿಮಾದಲ್ಲಿ ನಟನೆ ಮಾಡುತ್ತಾ ಡಬ್ಬಿಂಗ್‌ ಕೂಡ ತಾವೇ ಮಾಡುತ್ತಿದ್ದಾರೆ.

ಈ ಹಿಂದೆ 2012ರಲ್ಲಿ ಪೂಜಾ ಗಾಂಧಿ ಕೈಗಾರಿಕೋದ್ಯಮಿ ಆನಂದ್‌ ಗೌಡ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಎಂಗೇಜ್‌ಮೆಂಟ್‌ ಆದ ಕೆಲ ತಿಂಗಳಲ್ಲೇ ಈ ಮದುವೆ ಪ್ರಸ್ತಾಪ ಮುರಿದುಬಿದ್ದಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು