NEWSನಮ್ಮಜಿಲ್ಲೆಸಂಸ್ಕೃತಿ

ನಾನು ಕನ್ನಡ ಶಾಲೆಯ ಓದಿದವನು ಎಂದು ಹೇಳಿಕೊಳ್ಳಲು ಹೆಮ್ಮೆ : ನಿವೃತ್ತ ನ್ಯಾ. ಅರಳಿ ನಾಗರಾಜ

ವಿಜಯಪಥ ಸಮಗ್ರ ಸುದ್ದಿ

ಹನೂರು: ಕನ್ನಡ ಮಾಧ್ಯಮದಲ್ಲಿ ಓದಿದವನು ಎಂದು ಹೇಳಲು ನನಗೆ ಬಹಳ ಹೆಮ್ಮೆ ಇದೆ ಎಂದು ನಿವೃತ್ತ ಹೈ ಕೋರ್ಟ್‌ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದ್ದಾರೆ.

ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜೆಎಸ್‌ಬಿ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ – ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆದು, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಿ, ಮಾತನಾಡಿದರು.

ಕರ್ನಾಟಕದ ಉಚ್ಚ ನ್ಯಾಯಾಲಯ ಸ್ಥಾಪಿತವಾಗಿ ಐವತ್ತಕ್ಕಿಂತ ಹೆಚ್ಚು ವರ್ಷಗಳು ಕಳೆದಿದ್ದರೂ, ಯಾವುದೇ ತೀರ್ಪು ಕನ್ನಡದಲ್ಲಿ ಇರುವುದಿಲ್ಲ. ಕನ್ನಡಿಗನಾದ ನಾನು ಕನ್ನಡದಲ್ಲೇ ನ್ಯಾಯಾಲಯದ ತೀರ್ಪುಗಳನ್ನು ನೀಡಿದ್ದೇನೆ. ಇದು ನಾನು ನನ್ನ ಭಾಷೆಗೆ ಸಲ್ಲಿಸಿದ ಗೌರವವಾಗಿದೆ ಎಂದರು.

ಕನ್ನಡವನ್ನು ನಮ್ಮ ಉಸಿರಾಗಿಸಿಕೊಳ್ಳಬೇಕು. ಬೇರೆ ಭಾಷೆಗಳನ್ನು ಕಲಿಯಬೇಕು, ನಮ್ಮ ಭಾಷೆಯನ್ನು ಬಳಸಿ, ಬೆಳೆಸಬೇಕು. ನಾಡು-ನುಡಿಯ ಬಗ್ಗೆ ಪೂಜನೀಯ ಭಾವನೆಯನ್ನು ಹೊಂದಿರಬೇಕು. ಕನ್ನಡದ ಮೇಲೆ ಪ್ರೀತಿ ಇರಬೇಕು, ಅದು ಎಷ್ಟೆಂದರೆ, ನಮ್ಮ ತಾಯಿಯ ಪ್ರೀತಿಗಿಂತ ಹೆಚ್ಚಿರಬೇಕು. ಕವಿ ಮಹಾಲಿಂಗರಂಗರು, ನಮ್ಮ ಭಾಷೆ ಕಲಿಯುವುದು ಸುಲಿದ ಬಾಳೆಹಣ್ಣನ್ನು ತಿನ್ನಲು ಕೊಟ್ಟಹಾಗೆ, ಸಿಪ್ಪೆ ತೆಗೆದು ಕಬ್ಬನ್ನು ತಿನ್ನಲು ಕೊಟ್ಟಹಾಗೆ, ಕರೆದು ನೊರೆಹಾಲನ್ನು ನುಡಿಯಲು ಕೊಟ್ಟಂತೆ ಎಂದು ಹೇಳಿದ್ದಾರೆ. ಅದನ್ನು ನಾವೆಲ್ಲರೂ ಅರ್ಥೈಸಬೇಕಿದೆ ಎಂದರು.

ಕನ್ನಡ ಸಾಹಿತ್ಯವನ್ನು ಓದುವುದರಿಂದ ನಾವು ವಿಚಾರವಂತರಾಗುತ್ತೇವೆ. ಅವು ಜ್ಞಾನ ಭಂಡಾರ ಹೆಚ್ಚಿಸುತ್ತದೆ. ನಮ್ಮ ಭಾವನೆ, ಜೀವನವೆಲ್ಲಾ ಕನ್ನಡವಾಗಿರಬೇಕು. ನಮ್ಮ ಮೇಲೆ ಬಲವಂತವಾಗಿ ಬೇರೆ ಭಾಷೆಯನ್ನು ಹೇರಲಾಗುತ್ತಿದೆ. ಇದು ನಿಲ್ಲಬೇಕು. ಕನ್ನಡ ನಮ್ಮ ಅಸ್ಮಿತೆ, ಅಸ್ತಿತ್ವ ಎಂಬುದನ್ನು ನಾವು ಮನಗಾಣಬೇಕು. ನನ್ನದೆ ಭಾಷೆಯಲ್ಲಿ ಕೇಳುವುದರಿಂದ, ಕಲಿಯುವುದರಿಂದ, ನನ್ನದೇ ಭಾಷೆಯಲ್ಲಿ ಮಾತಾನಾಡುವುದರಿಂದ ನಮಗೆ ಚೆನ್ನಾಗಿ ಅರ್ಥವಾಗುತ್ತದೆ. ಗ್ರಹಿಕೆಯಾಗುತ್ತದೆ ಎಂದು ಹೇಳಿದರು.

ಗುರಿಯನ್ನು ಸಾಧಿಸಲು ಅಧ್ಯಯನ ಅಗತ್ಯ. ಅಧ್ಯಯನಕ್ಕೆ ಏಕಾಗ್ರತೆ ಬೇಕು, ಅದು ಬರಲು ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಇದು ಸಾಧ್ಯವಾಗುವುದು, ಕನ್ನಡವನ್ನು, ಕನ್ನಡತನವನ್ನು, ಕನ್ನಡದ ಸಂಸ್ಕಾರಗಳನ್ನು ಕಲಿಯುವುದರಿಂದ. ನಮ್ಮ ದೇಹವು ಸಮಾಜದ ಋಣದಿಂದ ಕೂಡಿದ್ದು, ಸಮಾಜದ ಋಣ ತೀರಿಸಲು ಬಸವಾದಿ ಶರಣರು ಹಾಕಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.

ಇನ್ನು ನುಡಿದಂತೆ ನಡೆಯಬೇಕು. ಅದೇ ನಿಜವಾದ ಜೀವನ. ಇಂದು ಕನ್ನಡ ಶಾಲೆಗಳು ಮುಚ್ಚುತ್ತಿವೆ ಅದಕ್ಕೆ ಕಾರಣ ಹಲವು. ಸಾಹಿತ್ಯ ಪರಿಷತ್ತಿನಂತಹ ಕನ್ನಡ ಸಂಘಟನೆಗಳು ಕನ್ನಡ ಶಾಲೆಗಳ ಸ್ಥಿತಿ ಗತಿಗಳನ್ನು ಅಧ್ಯಾಯನ ಮಾಡಬೇಕು. ಮೂಲಭೂತ ಸೌಕರ್ಯ, ಕುಂದುಕೊರತೆಗಳನ್ನು ಪರಿಶೀಲನೆ ಮಾಡಿ, ಸ್ಥಳೀಯ ಸಂಸ್ಥೆಗಳ ಮೂಲಕ ಒದಗಿಸುವ ಕೆಲಸ ಮಾಡಬೇಕು. ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ, ಜನಪ್ರತಿನಿಧಿಗಳ ಮೂಲಕ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು. ಆವಾಗ ಮಾತ್ರ ಕನ್ನಡ ಶಾಲೆಗಳ ಉಳಿವು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ನಾಡಿಗಾಗಿ ಸೇವೆಯನ್ನು ಸಲ್ಲಿಸಿದರನ್ನು ನಾವು ಸ್ಮರಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಸಾರ್ಥಕ ಜೀವನ ನಡೆಸಬೇಕು. ಜನರು ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆದರ್ಶ ನಾಯಕನನ್ನು ಆರಿಸಿದಾಗ ಅಭಿವೃದ್ಧಿ ಸಾಧ್ಯ. ಜನರು ಭ್ರಷ್ಟರಾದರೆ, ಅವರ ನಾಯಕನೂ ಅದೇ ದಾರಿಯಲ್ಲಿ ಸಾಗುತ್ತಾನೆ. ಇದರಿಂದ ಸ್ವಸ್ಥ, ಸುಂದರ ಸಮಾಜದ ನಿರ್ಮಾಣವಾಗುವುದಿಲ್ಲ, ಅದ್ದರಿಂದ ನಾವೆಲ್ಲರೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ ಹನೂರು ಘಟಕದ ಮಲ್ಲೇಶ ಮಾಲಿಂಕಟ್ಟೆ ವಹಿಸಿದ್ದರು. ಜೆ ಎಸ್ ಬಿ ಪ್ರತಿಷ್ಠಾನದ ಶಶಿಕುಮಾರ್ ಮಾತನಾಡಿದರು. ದಿವ್ಯಸಾನ್ನಿಧ್ಯ ವಹಿಸಿದ್ದ ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಮಹದೇವ ಪ್ರಭುಸ್ವಾಮಿ, ಸುರೇಶ, ಮಹೇಶ, ಜಗದೀಶ, ರಾಜು, ಅಯ್ಯೂ ನಾಯಕ, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ