NEWSನಮ್ಮಜಿಲ್ಲೆರಾಜಕೀಯ

ನಾನು ಯಾವುದೇ ಬ್ಲಾಕ್‌ಮೇಲ್‌ಗೆ ಹೆದರುವುದಿಲ್ಲ : ಶಾಸಕ ಸಾ.ರಾ.ಮಹೇಶ್‌ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌, ಮನೀಶ್‌ ಮೌದ್ಗಿಲ್, ರೋಹಿಣಿ ಸಿಂಧೂರಿ ಅವರೇ ಚೈನ್‌ ಹಿಡಿದು ಸರ್ವೇ ಮಾಡಲಿ. ನಾನು ಯಾವುದೇ ಬ್ಲಾಕ್‌ಮೇಲ್‌ಗೆ ಹೆದರುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿಯಾಗಲಿ, ಮನೀಶ್ ಮೌದ್ಗಿಲ್ ಆಗಲಿ ನನ್ನನ್ನು ಬ್ಲಾಕ್ ಮೇಲ್ ಮಾಡಿ ಹೆದರಿಸಲು ಸಾಧ್ಯವಿಲ್ಲ. ನಾನು ಯಾವುದೇ ಬ್ಲಾಕ್ ಮೇಲ್‌ಗೂ ಹೆದರುವುದಿಲ್ಲ ಎಂದು ಹೇಳಿದರು.

ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರದ ನಡುವೆ ನಡೆಯುತ್ತಿರುವ ಹೋರಾಟವನ್ನು ನಾನು ಇಲ್ಲಿಗೆ ನಿಲ್ಲಿಸುವುದಿಲ್ಲ. ನನ್ನ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ. ನನ್ನ ಇದುವರೆಗಿನ ಸಾರ್ವಜನಿಕ ಬದುಕಿನಲ್ಲಿ ಎಂದೂ ಕೂಡ‌‌ ಕಿಕ್ ಬ್ಯಾಕ್ ಪಡೆದಿಲ್ಲ.

ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಒಂದನ್ನು ಸಾಬೀತು ಮಾಡಿದರೂ ಕೂಡ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕ ಬದುಕಿನಿಂದ ದೂರವಾಗುತ್ತೇನೆ. ಬೇರೆಯವರನ್ನು ಬ್ಲಾಕ್ ಮೇಲ್ ಮಾಡಬಹುದು, ಆದರೆ ನನ್ನನ್ನು ಬ್ಲಾಕ್ ಮೇಲ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜಕಾಲುವೆ, ಗೋಮಾಳದ ಒಂದೇ ಒಂದು ಗುಂಟೆ ಒತ್ತುವರಿ ಆಗಿದ್ದರೆ ಚೆಕ್ ಮಾಡಿ ಬನ್ನಿ. ನಾನೇ ನಿಮಗೆ ಬೊಕ್ಕೆ ನೀಡಿ ಸರ್ವೇಗೆ ಸ್ವಾಗತಿಸುತ್ತೇನೆ. ನಿಮ್ಮ ಶಿಷ್ಯೆನೋ, ಜ್ಯೂನಿಯರ್ ಇದ್ದಾರಲ್ಲ ಅವರು ಆಸ್ತಿ ಘೋಷಣೆ ಮಾಡಿದ್ದಾರಾ ಮನೀಷ್ ಮುದ್ಗಲ್ ಅವರೇ? ಕಾನೂನಿನಲ್ಲಿ ಅವಕಾಶ ಇದ್ದರೂ ಶಿಷ್ಯೆಗಾಗಿ ಸರ್ವೇಗೆ ಆದೇಶ ಮಾಡಿದ್ದೀರಿ. ನಿಮ್ಮ ಕುಚುಕು ಶಿಷ್ಯೆಗಾಗಿ ಆದೇಶ ಮಾಡಿದ್ದೀರಿ ಎಂದು ಶಾಸಕರು ವಾಗ್ದಾಳಿ ನಡೆಸಿದ್ದಾರೆ.

ಸಾರಾಗೆ ಭೂ ಕಂಟಕ:
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್‍ಬ್ಯಾಕ್ ಆರೋಪ ಮಾಡಿದ್ದ ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ ಎದುರಾದಂತೆ ಇದೆ.

ಮೈಸೂರು-ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತನಿಖೆಗೆ ಹೊಸ ತಂಡ ರಚಿಸಿ ಭೂಕಂದಾಯ ಇಲಾಖೆ ಆಯುಕ್ತ ಮನಿಷ್ ಮೌದ್ಗಿಲ್ ಆದೇಶ ಹೊರಡಿಸಿದ್ದರು.

ಕೇರಗಳ್ಳಿಯ ಸರ್ವೇ ನಂಬರ್ 115, ಯಡಹಳ್ಳಿಯ ಸರ್ವೇ ನಂಬರ್ 69,72, ದಟ್ಟಗಳ್ಳಿಯ ಸರ್ವೇ ನಂಬರ್ 130/3, ಲಿಂಗಾಬುದಿ ಸರ್ವೇ ನಂಬರ್ 10ರಲ್ಲಿ ನಡೆದ ಭೂಒತ್ತುವರಿಗಳ ತನಿಖೆ ನಡೆಸಿ 10 ದಿನದಲ್ಲಿ ವರದಿ ನೀಡಲು ಸೂಚಿಸಿದ್ದಾರೆ.

ದಟ್ಟಗಳ್ಳಿ ಮತ್ತು ಲಿಂಗಾಬುದಿ ಸರ್ವೇ ನಂಬರ್ ಗಳಲ್ಲಿ ಸಾರಾ ಮಹೇಶ್ ಒಡೆತನದ ತೋಟ, ಕಲ್ಯಾಣ ಮಂಟಪ ಇದೆ. ಹೀಗಾಗಿ ಸಹಜವಾಗಿಯೇ ಇವುಗಳ ಸರ್ವೇ ಕೂಡ ನಡೆಯಲಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು