NEWSನಮ್ಮರಾಜ್ಯಶಿಕ್ಷಣ-

ನಾನು ಲಾಸ್ಟ್ ಬೆಂಚ್ ವಿದ್ಯಾರ್ಥಿ ಕಾಪಿ ಹೊಡೆದು ಪಾಸಾಗಿದ್ದೇನೆ : ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನಾನು ನಿಮ್ಮಷ್ಟು ಬುದ್ಧಿವಂತ ಅಲ್ಲ. ಲಾಸ್ಟ್ ಬೆಂಚ್ ವಿದ್ಯಾರ್ಥಿ. ಕಾಪಿ ಹೊಡೆದು ಪಾಸಾಗಿದ್ದೇನೆ. ಕಾಪಿ ಹೊಡೆಯುವುದರಲ್ಲಿ ನಾನು ಪಿಎಚ್ ಡಿ ಮಾಡಿದ್ದೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಕಾಲೇಜ್ ದಿನಗಳನ್ನು ಶನಿವಾರ ಮೆಲುಕು ಹಾಕಿದ್ದಾರೆ.

ಇಂದು ವೀರಶೈವ ವಿದ್ಯಾವರ್ಧಕ ಸಂಘದ ಎಸ್‌ಜಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೊದಲು ನಾನೂ ಗೂಂಡಾಗಿರಿ ಮಾಡುತ್ತಿದ್ದೆ. ತುಂಬಾ ಜಗಳ ಮಾಡುತ್ತಿದ್ದೆ. ಬಡವರಿಗೆ ಯಾರಾದ್ರೂ ತೊಂದರೆ ಕೊಟ್ಟಾಗ ಮಾತ್ರ ಗೂಂಡಾಗಿರಿ ಮಾಡುತ್ತಾ, ಅವರ ಪರವಾಗಿ ನಿಲ್ಲುತ್ತಿದೆ. ಬಡವರ ಪರವಾಗಿ ನಿಂತು ಜಗಳವಾಡಿ 14-15 ಬಾರಿ ಜೈಲಿಗೂ ಹೋಗಿದ್ದೆ ಎಂದು ಹೇಳಿದರು.

ಇನ್ನು ವಕೀಲರ ಬಳಿ ನಮ್ಮಪ್ಪ ಹೋಗಿ ನನಗೆ ಬೇಲ್‌ ಮಾಡಿಸಿಕೊಡಿ ಎಂದು ಕೇಳುತ್ತಿದ್ದರು. ಆಗ ನಿಮ್ಮ ಮಗನಿಗೆ ಎಷ್ಟು ಬಾರಿ ಬೇಲ್‌ ಮಾಡಿಸಬೇಕು ಎಂದು ವಕೀಲರು ಹೇಳುತ್ತಿದ್ದರು. ಅಲ್ಲದೆ ಇವನಿಂದ ನನಗೆ ಕೆಲಸ ಸಿಕ್ಕಂತಾಗಿದೆ ಎಂದು ಹೇಳುತ್ತಿದ್ದರು ಎಂದು ನೆನಪಿಸಿಕೊಂಡರು.

ಕಾಲೇಜಿಗೆ ನಾನು ಜೀನ್ಸ್‌ಪ್ಯಾಂಟ್‌ ಹಾಕಿಕೊಂಡು ಹೋದ್ರೆ ಹುಡುಗೀರೆಲ್ಲಾ ನನ್ನನ್ನೇ ನೋಡುತ್ತಿದ್ದರು. ನನಗೆ ಓದು ತಲೆಗೆ ಹತ್ತಲಿಲ್ಲ, ಆದರೆ ಸಂಸ್ಕಾರ ಮಾತ್ರ ಬಿಡಲಿಲ್ಲ. ನಾನು ಬಾರಿ ಬುದ್ಧಿವಂತನಲ್ಲ, ಲಾಸ್ಟ್​ ಬೆಂಚ್ ಸ್ಟೂಡೆಂಟ್​. ಶಿಕ್ಷಕರು ಪ್ರೀತಿಯಿಂದ ಬೈಯ್ತಿದ್ದರು. 5 ಬಾರಿ ಶಾಸಕ, 4 ಬಾರಿ ಸಚಿವನಾಗಿರುವುದಕ್ಕೆ ವಿವಿ ಸಂಘ ಕಾರಣ. ಸಂಸ್ಕಾರ ಗೊತ್ತಿರದ ದಿನಗಳಲ್ಲಿ ನನಗೆ ಸಂಸ್ಕಾರ ನೀಡಿದ್ದು ಈ ಸಂಘ ಎಂದರು.

ಶಿಕ್ಷಕರು ಬಂದಾಗ ಲಾಸ್ಟ್​ ಬೆಂಚ್​ನಲ್ಲಿ ಕುಳಿತು ಅಂಗಿಸುತ್ತಿದ್ದೆವು. ಕನ್ನಡ ಬರಲ್ಲ, ತೆಲುಗು ಬರಲ್ಲ, ಇಂಗ್ಲಿಷ್ ಬರಲ್ಲ ಎಂದು ಹೇಳುತ್ತಿದ್ದರು. ನೀನು ಯಾವ ಶಾಲೆಯಲ್ಲಿ ಓದಿದ್ದು ಎಂದು ಶಿಕ್ಷಕರು ಕೇಳುತ್ತಿದ್ದರು ಎಂದು ಶ್ರೀರಾಮುಲು ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ