NEWSನಮ್ಮಜಿಲ್ಲೆ

ನಿರ್ಬಂಧಿತ ಪ್ರದೇಶದ ಸಮುದಾಯವನ್ನು ಪರೀಕ್ಷೆಗೆ ಒಳಪಡಿಸಿ

ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿ ಆಯುಕ್ತ ಆದಿತ್ಯ ಬಿಸ್ವಾಸ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ:  ಕೊರೊನಾ ಸೋಂಕಿತ ವ್ಯಕ್ತಿಗಳ ವಾಸದ ಕಂಟೆನ್‍ಮೆಂಟ್ ಮತ್ತು ಬಫರ್ ಝೋನದಲ್ಲಿರುವ ಸಮುದಾಯದ ಎಲ್ಲ ಜನರನ್ನು ಪರೀಕ್ಷೆಗೆ ಒಳಪಡಿಸುವಂತೆ ಬೆಳಗಾವಿ ಪ್ರಾದೇಶಿ ಆಯುಕ್ತ ಅಮ್ಲಾನ ಆದಿತ್ಯ ಬಿಸ್ವಾಸ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾದಿಕಾರಿಗಳ ಸಭಾಂಗಣದಲ್ಲಿಂದು ಕೋವಿಡ್-19 ಕುರಿತು ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಕೋವಿಡ್ ನೋಡಲ್ ಅಧಿಕಾರಿಗ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಕಂಟೆನ್‍ಮೆಂಟ್ ಝೋನ್‍ನಲ್ಲಿ ಒಟ್ಟು 6500 ಜನರಿದ್ದು,   60 ವರ್ಷ ಮೇಲ್ಪಟ್ಟ ವೃದ್ದರ ಮೇಲೆ ಹೆಚ್ಚು ನಿಗಾ ವಹಿಸಿ ಪರೀಕ್ಷೆಗೆ ಒಳಪಡಿಸಬೇಕು. ಈ ಪ್ರದೇಶದಲ್ಲಿರುವ ಕುಟುಂಬಗಳಿಗೆ ಕುಡಿಯುವ ನೀರು ಹಾಗೂ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದರು.

ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಮುಂದಿನ ಸಿದ್ದತೆಗೆ ಎಚ್ಚರವಾಗಿ ಸಿದ್ದರಾಗಬೇಕಿದೆ. ಯಾವುದೇ ಸಾವನ್ನು ಸಹ ಕಾರಣ ಏನೆಂಬುದನ್ನು ವೈದ್ಯಕೀಯ ಪರೀಕ್ಷಿಸದೇ ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಈ ಕುರಿತು ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳು, ನಗರ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನಿಗಾ ವಹಿಸಲು ಸೂಚಿಸಿದರು. ಸಮುದಾಯದವರ ರೋಗನಿರೋದಕ ಶಕ್ತಿಯನ್ನು ಹೆಚ್ಚಿಸಲು ಕಾಳಜಿ ವಹಿಸಬೇಕು.

ಡ್ರಗ್ಸ್ ಕಂಟ್ರೋಲರ್‍ಗಳು ಪ್ರತಿ ಔಷಧಿ ಅಂಗಡಿಗಳಲ್ಲಿ ಬರುವ ಹೈಪರ್‍ಟೆನ್ಸನ್, ಡೈಯಾಬಿಟಿಸ್ ಮತ್ತು ಜ್ವರ ಇರುವ ವ್ಯಕ್ತಿಗಳ ಹೆಸರು ಹಾಗೂ ಮೊಬೈಲ್ ನಂಬರಗಳನ್ನು ಬರೆದಿಟ್ಟು ಕೊಳ್ಳಬೇಕು. ಇವರನ್ನು ಸಹ ಕೋವಿಡ್ ಪರೀಕ್ಷೆಗೆ ಒಳಪಡಿಸಲು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸರ್ವೆಲೆನ್ಸ್ ಅಧಿಕಾರಿಗಳು ಹೆಚ್ಚು ಕಾಳಜಿ ವಹಿಸಬೇಕು. ಸ್ಯಾಂಪಲ್‍ಗಲು ಹೆಚ್ಚು ರಿಜೆಕ್ಟ್ ಆಗುತ್ತಿರುವದರಿಂದ ಗಂಟಲು ದ್ರವ ತೆಗೆದುಕೊಳ್ಳುವವರು ಹೆಚ್ಚು ತರಬೇತಿಗೆ ಒಳಪಡಿಸಬೇಕು. ಎಎನ್‍ಎಂಗಳನ್ನು ಹೆಚ್ಚಿನ ತರಬೇತಿಗೊಳಿಸಲು ತಿಳಿಸಿದರು.

ಎನ್.ಎಚ್.ಎಂ ಅನುದಾನದಡಿ ಬ್ಲಡ್ ಸೇಲ್ ಕೌಂಟರ್ಸ್ ಸಹ ಖರೀದಿಸಬೇಕು. ಎಲ್ಲ ವೈದ್ಯರು ಮತ್ತು ನರ್ಸಗಳು ಕ್ವಾರಂಟೈನಾಗಿ ಕೇಂದ್ರದಲ್ಲಿಯೇ ಇರತಕ್ಕದ್ದು, ಮನೆಗೆ ಹೋಗುವಂತಿಲ್ಲ. ಆಕ್ಸಿಜನ್ ಸಿಲಿಂಡರ್‍ಗಳನ್ನು ಸ್ಟಾಕ್ ಇಟ್ಟುಕೊಳ್ಳಬೇಕು. ಎಲ್ಲಿಯೂ ಸಹ ಡಯಾಲಿಸಿಸ್ ನಿಲ್ಲಿಸಕೂಡದು. ತುರ್ತು ಪರಿಸ್ಥಿತಿ ಎದುರಾಗುವದಕ್ಕಿಂತ ಮುಂಚೆಯೇ ಎಲ್ಲವನ್ನು ಸಿದ್ದಗೊಳಿಸಿಕೊಳ್ಳಲು ತಿಳಿಸಿದರು. ಹೈಡ್ರೋಕ್ಲೋರೋಫಿನ್ ಸ್ಟೋರ್ ಇರಬೇಕು ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಜಿಲ್ಲೆಗೆ ಬೇರೆ ರಾಜ್ಯಗಳಿಂದ ಬಂದ ವಲಸೆ ಕೂಲಿ ಕಾರ್ಮಿಕರನ್ನು 8 ವಸತಿ ನಿಲಯಗಳಲ್ಲಿ ತೆರೆಯಲಾದ ಪರಿಹಾರ ಕೇಂದ್ರದಲ್ಲಿ ಇರಿಸಿ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಪರಿಹಾರ ಕೇಂದ್ರದಲ್ಲಿ 178 ಜನರನ್ನು ಕ್ವಾರಂಟೈನಾಗಿ ಇರಿಸಲಾಗಿದೆ. ಐಸಿಯು ವಾರ್ಡಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 6, ಆಯಾ ತಾಲೂಕಾ ಆಸ್ಪತ್ರೆಗಳು ಸೇರಿ 15, ಕುಮಾರೇಶ್ವರ ಆಸ್ಪತ್ರೆಯಲ್ಲಿ 5 ಹಾಗೂ ಕೆರೂಡಿ ಆಸ್ಪತ್ರೆಯಲ್ಲಿ 2 ಸೇರಿ ಒಟ್ಟು 28 ಐಸಿಯು ವಾರ್ಡ್‌ಗಳು ಇರುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕೋವಿಡ್ ವಿಶೇಷ ಅಪರ ಜಿಲ್ಲಾಧಿಕಾರಿ ಬಸವರಾಜ ಸೋಮಣ್ಣವರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಡಿಎಚ್‍ಓ ಡಾ.ಎ.ಎನ್.ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ