CrimeNEWSಸಂಸ್ಕೃತಿ

ಪಿಎಫ್‌ಐ ಬೆದರಿಕೆ : ಮೇಲುಕೋಟೆ ಶ್ರೀ ನಾರಾಯಣ ರಾಮಾನು ಜೀಯರ್‌ಗೆ ವೈ ಮಾದರಿ ಭದ್ರತೆ..!?

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ : ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಎದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇದಿತಾ ಪಿಎಫ್‌ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ.

ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್‌ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ಸುದ್ಧಿ ವಾಹಿನಿಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು, ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗುತ್ತಿದ್ದರು.

ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು.

ಈ ಮಾತಿನಿಂದ ಕೆರಳಿದ ಪಿ.ಎಫ್.ಐ. ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿತ್ತು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.

ಶ್ರೀಗಳಿಗೆ ಈ ಹಿಂದೆಯೂ ಭದ್ರತೆ ನೀಡಿದ್ದು, ಇತ್ತೀಚೆಗೆ ಅದನ್ನು ವಾಪಸ್ಸು ಪಡೆಯಲಾಗಿತ್ತು. ಪಿಎಫ್‌ಐ ಸಂಘಟನೆಯ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ವೈ ಮಾದರಿ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ಸಧ್ಯ ಶ್ರೀಗಳು ತಮಿಳುನಾಡಿನಲ್ಲಿರುವ ಶಾಖಾ ಮಠಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ಕೇಂದ್ರ ಗುಪ್ತಚರ ಇಲಾಖೆಯಿಂದ ರಾಜ್ಯ ಗುಪ್ತಚರ ಇಲಾಖೆಗೆ ಸೂಚನೆ ಬರಲಿದ್ದು, ನಂತರ ನಮಗೆ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ