NEWSನಮ್ಮಜಿಲ್ಲೆ

ಪಡಿತರದಾರರಿಂದ ದೂರು ದೃಢಪಟ್ಟಲ್ಲಿ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಸರ್ಕಾರದ ನಿಯಮದನ್ವಯ ಪಡಿತರ ವಸ್ತುಗಳನ್ನು ಓಟಿಪಿ ಮೂಲಕ ವಿತರಣೆ ಮಾಡಲು ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಯವರಿಗೆ ಸೂಚಿಸಲಾಗಿದ್ದು, ಒಂದು ವೇಳೆ ಪಡಿತರ ಚೀಟಿದಾರರಿಂದ ಏನಾದರೂ ದೂರುಗಳು ಬಂದು ಲೋಪಗಳು ದೃಢಪಟ್ಟಲ್ಲಿ  ಅಂತಹ ನ್ಯಾಯಬೆಲೆ ಅಂಗಡಿಯವರ ಪ್ರಾಧಿಕಾರ ಪತ್ರವನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣ ಕುರಿತು ತಮ್ಮ ಕಚೇರಿಯಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಏ. 14 ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ ಏ. ಹಾಗೂ ಮೇ ತಿಂಗಳ ಮುಂಗಡ ಪ್ರಮಾಣ ಸೇರಿದಂತೆ ವಿತರಣೆ ಮಾಡಲು 18038 ಎಂಟಿ ಅಕ್ಕಿ ಹಾಗೂ 1870 ಎಂಟಿ ಗೋಧಿಯು ಸರ್ಕಾರದಿಂದ ಜಿಲ್ಲೆಗೆ ಹಂಚಿಕೆಯಾಗಿದೆ ಎಂದರು.

ಜಿಲ್ಲೆಯಲ್ಲಿ 835 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಆಯಾ ತಾಲೂಕು ಸಗಟು ಮಳಿಗೆಗಳಿಂದ ಆಹಾರ ಧಾನ್ಯಗಳು ಈಗಾಗಲೇ ಸಾಗಾಣಿಕೆ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಸುಮಾರು 400 ಅಂಗಡಿಗಳಿಗೆ ಪಡಿತರ ವಸ್ತುಗಳಾದ ಅಕ್ಕಿ ಮತ್ತು ಗೋಧಿಯನ್ನು ಸಾಗಾಣಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಏ.ತಿಂಗಳಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯು ಅನ್ನಭಾಗ್ಯ ಯೋಜನೆಯಡಿ ಪ್ರತಿ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ ಪ್ರತಿ ಯೂನಿಟ್ಟಿಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 4 ಕೆಜಿ ಗೋಧಿಯಂತೆ ಉಚಿತವಾಗಿ ವಿತರಣೆ ಮಾಡಲು ಹಂಚಿಕೆ ಮಾಡಲಾಗಿದೆ ಎಂದರು.

ಪಡಿತರ ವಸ್ತುಗಳು ಲಭ್ಯವಾಗಿಲ್ಲವೆಂದು ಯಾವುದೇ ಪಡಿತರ ಚೀಟಿದಾರರು ಆತಂಕಪಡುವ ಅವಶ್ಯಕತೆ ಇರುವುದಿಲ್ಲ. ಪಡಿತರ ಚೀಟಿದಾರರು ಪಡಿತರ ವಸ್ತುಗಳ ವಿತರಣೆಗೆ ಸಂಬಂಧಿಸಿದಂತೆ ಯಾವುದಾದರೂ ದೂರುಗಳಿದ್ದಲ್ಲಿ 1967 ಕೇಂದ್ರ ಸಹಾಯವಾಣಿ ಅಥವಾ ಜಿಲ್ಲಾಧಿಕಾರಿಗಳ ಕಛೇರಿಯ ಆಹಾರ ಶಾಖೆಯ ದೂರವಾಣಿ ಸಂಖ್ಯೆ 08352-250419ಗೆ ಸಂಪರ್ಕಿಸಿ ತಮ್ಮ ಅಹವಾಲು ದಾಖಲಿಸಬಹುದು ಎಂದು ಸಲಹೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ