NEWSನಮ್ಮಜಿಲ್ಲೆಸಂಸ್ಕೃತಿ

ಪಾಂಡವಪುರ: ಪುನೀತೋತ್ಸವ ಪ್ರಚಾರ ವಾಹನಗಳಿಗೆ ಸಿ.ಟಿ.ಶಿವರಾಜು ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಪಾಂಡವಪುರ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ರೀಡಾಂಗಣದಲ್ಲಿ ನ. 25, 26, 27 ರಂದು ಮೂರು ದಿನಗಳ ಕಾಲ ನಡೆಯಲಿರುವ ಅಪ್ಪು ಸ್ಮರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುನೀತೋತ್ಸವ ಪ್ರಚಾರ ವಾಹನಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಹಾಗೂ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಟಿ.ಶಿವರಾಜು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಶಾಸಕರ ನೇತೃತ್ವದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಂದ ನ.25 ರ ಸಂಜೆ 5.30ಕ್ಕೆ ಪುನೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದ್ದು, ಈ ಹಿನ್ನೆಯಲ್ಲಿ ಐದು ಪ್ರಚಾರ ವಾಹನಗಳು ಕ್ಷೇತ್ರದ 5ಹೋಬಳಿಗಳಲ್ಲಿ ಪ್ರಚಾರ ಮಾಡಲಿವೆ ಎಂದು ತಿಳಿಸಿದರು.

ಸ್ಯಾಂಡಲ್‌ವುಡ್ ನಿರ್ದೇಶಕ ಹರ್ಷ ಅವರು ಕಾರ್ಯಕ್ರಮದ ಹೊಣೆ ಹೊತ್ತಿದ್ದು ಮೂರು ದಿನಗಳ ಕಾಲ ನಡೆಯಲಿರುವ ಮನರಂಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದೇ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಕೃಷ್ಣೆಗೌಡ ಅವರಿಗೆ ಗೌರವ ಸಮರ್ಪಣೆ. ಅರ್ಜುನ್ ಜನ್ಯ, ರಾಜ್ ಕುಟುಂಬದ ಸದಸ್ಯರು ಸೇರಿದಂತೆ ಸ್ಯಾಂಡಲ್‌ವುಡ್‌ನ ಹಲವು ನಟ ನಟಿಯರು ಭಾಗಿಯಾಗಲಿದ್ದಾರೆ ಎಂದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಅರ್ಚನಾ ಚಂದ್ರು, ಸದಸ್ಯರಾದ ಮಹಾತ್ಮಾಗಾಂಧಿನಗರ ಚಂದ್ರು, ಎಂ.ಗಿರೀಶ್, ಶಿವಕುಮಾರ್, ಇಮ್ರಾನ್, ಸುನೀತಾ, ಕಸಾಪ ಅಧ್ಯಕ್ಷ ಮೆನಾಗರ ಪ್ರಕಾಶ್, ಚಂದ್ರಶೇಖರಯ್ಯ, ಲಕ್ಚ್ಮಯ್ಯ ಇತರರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ