NEWSಕ್ರೀಡೆದೇಶ-ವಿದೇಶ

ಪ್ಯಾರಾಲಿಂಪಿಕ್‌ನಲ್ಲಿ ಬೆಳ್ಳಿ ಗೆದ್ದ ಭಾವಿನಾ ಪಟೇಲ್‌ಗೆ 3 ಕೋಟಿ ರೂ. ಬಹುಮನ ಘೋಷಿಸಿದ ಗುಜರಾತ್ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಮೆಹ್ಸಾನಾ: ಟೋಕಿಯೋ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಬಹುಮಾನಗಳ ಮಳೆ ಶುರುವಾಗಿದೆ. ಈ ನಿಟ್ಟಿನಲ್ಲಿ ಗುಜರಾತ್ ಸರ್ಕಾರದಿಂದ ಮೂರು ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ.

ಭಾವಿನಾ ಟೇಬಲ್ ಟೆನ್ನಿಸ್ ಕ್ಲಾಸ್ 4. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರು. ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ದೇಶದ ಎರಡನೇ ಮಹಿಳಾ ಆಟಗಾರ್ತಿ ಭಾವಿನಾ. ಅದೇ ಸಮಯದಲ್ಲಿ, ಟೇಬಲ್ ಟೆನ್ನಿಸ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯರು ಸಹ ಆಗಿದ್ದಾರೆ.

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಸಣ್ಣ ಕಿರಾಣಿ ಅಂಗಡಿಯನ್ನು ನಡೆಸುತ್ತಿರುವ ಹಸ್ಮುಖಭಾಯಿ ಪಟೇಲ್ ಅವರ ಮಗಳಾದ ಭಾವಿನಾ ಅವರು ಪದಕ ಗೆಲ್ಲುವ ಸ್ಪರ್ಧಿ ಎಂದು ಯಾರು ಪರಿಗಣಿಸಿರಲಿಲ್ಲ. ಆದರೆ ಅವರು ತಮ್ಮ ಅದ್ಭುತ ಪ್ರದರ್ಶನದಿಂದ ಇತಿಹಾಸವನ್ನು ಸೃಷ್ಟಿಸಿದರು. ಈ ವಿಜಯದ ನಂತರ, ದೇಶದಾದ್ಯಂತ, ವಿಶೇಷವಾಗಿ ಭಾವಿನಾ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಸಂಭ್ರಮದ ವಾತಾವರಣವಿದೆ.

ಬಹುಮಾನ ಘೋಷಿಸಿದ ಗುಜರಾತ್ ಸರ್ಕಾರ
ಈ ಪ್ರತಿಭೆಯನ್ನು ಗೌರವಿಸುವುದಕ್ಕೆ ಈಗ ಗುಜರಾತ್ ಸರ್ಕಾರ ಮುಂದಾಗಿದೆ. ಅವರು ಭಾರತಕ್ಕೆ ಬರುವ ಮುನ್ನವೇ ಸರ್ಕಾರ ಮೂರು ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಇದಲ್ಲದೇ, ಬೆಳ್ಳಿ ಪದಕ ವಿಜೇತೆಗೆ ಸರ್ಕಾರಿ ಉದ್ಯೋಗವನ್ನೂ ನೀಡಲಾಗುವುದು ಎಂದು ಹೇಳಿದೆ.

ಭಾವಿನಾ ಪಟೇಲ್ ತನ್ನ ವೃತ್ತಿ ಜೀವನದಲ್ಲಿ ಹಣದ ಕೊರತೆಯಿಂದ ಸಾಕಷ್ಟು ಕಷ್ಟಪಟ್ಟಿದ್ದರು. ಅದೇ ಸಮಯದಲ್ಲಿ, ಅವರು ಕೆಲಸಕ್ಕಾಗಿ ಸಾಕಷ್ಟು ಕಷ್ಟಪಟ್ಟಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾವಿನಾ ಅವರನ್ನು ವಿಜಯ್ ರೂಪಾನಿ ಅಭಿನಂದಿಸಿದರು.

ಟೋಕಿಯೋ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾವಿನಾ ಪಟೇಲ್ ಅವರಿಗೆ ಅಭಿನಂದನೆಗಳು. ಭಾವಿನಾ ಅವರಿಗೆ ಗುಜರಾತ್ ಸರ್ಕಾರದಿಂದ ಮೂರು ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಭಾವಿನಾ ಮನೆಯಲ್ಲಿ ಹಬ್ಬದ ವಾತಾವರಣ
ಭಾವಿನಾ ಪಟೇಲ್ ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ತಂದೆ, ಭಾವಿನಾ ಅಂಗವಿಕಲೆಯಾಗಿರಬಹುದು ಆದರೆ ನಾವು ಅವಳನ್ನು ಎಂದಿಗೂ ಆ ರೀತಿ ನೋಡಿಲ್ಲ. ನಮಗೆ ಅವರು ದೈವಿಕ. ಅವರು ದೇಶಕ್ಕಾಗಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ನಮಗೆ ಅತ್ಯಂತ ಸಂತೋಷವಾಗಿದೆ ಎಂದಿದ್ದಾರೆ.

ಭಾವಿನಾ ಪಟೇಲ್ ಅವರ ಆಟ ವಿಕ್ಷೀಸಲು ಗ್ರಾಮದಲ್ಲಿ ದೊಡ್ಡ ಪರದೆಯನ್ನು ಅಳವಡಿಸಲಾಗಿತ್ತು. ಜನರು ಪಂದ್ಯವನ್ನು ವೀಕ್ಷಿಸಲು ಬೆಳಗ್ಗೆಯಿಂದಲೇ ಜಮಾಯಿಸಿದ್ದರು. ಭಾವಿನಾ ಬೆಳ್ಳಿ ಗೆದ್ದ ಬಳಿಕ ಅಲ್ಲಿ ನೆರದಿದ್ದ ಎಲ್ಲರೂ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು