NEWSನಮ್ಮರಾಜ್ಯರಾಜಕೀಯ

ಪ್ರಣಾಳಿಕೆ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿ, ನಗದು ರಹಿತ ವೈದ್ಯಕೀಯ ಸೌಲಭ್ಯದ ಭರವಸೆ ನೀಡಿದ ಪಕ್ಷಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇದೇ 10ರಂದು ನಡೆಯಲಿರುವ ರಾಜ್ಯದ 16ನೇ ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಪ್ರಮುಖ ಮೂರು ಪಕ್ಷಗಳು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಕೆಲ ಬದಲಾವಣೆಗಳನ್ನು ತರುವುದಾಗಿ ತಮ್ಮ ಪ್ರಣಾಳಿಕೆಗಳಲ್ಲಿ ಭರವಸೆ ನೀಡಿವೆ.

ಅದರಲ್ಲಿ ಈಗಗಾಲೇ ಅಧಿಕಾರದಲ್ಲಿರುವ ಬಿಜೆಪಿಯು ನಮ್ಮ ಡಬಲ್‌ ಇಂಜಿನ್‌ ಸರ್ಕಾರವನ್ನು ರಾಜ್ಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತಂದರೆ ಸಾರಿಗೆ ನಿಗಮಗಳಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಬಿಡುವುದಾಗಿ ಹೇಳಿದೆ. ಆದರೆ, ನೌಕರರಿಗೆ ಏನು ಸೌಲಭ್ಯ ನೀಡುತ್ತೇವೆ ಎಂದು ಭರವಸೆ ಕೊಟ್ಟಿಲ್ಲ. ಕಾರಣ ಈಗಾಗಲೇ ನೌಕರರು ಇಟ್ಟಿರುವ ಯಾವೊಂದು ಬೇಡಿಕೆಯನ್ನು ಬಿಜೆಪಿ ಈಡೇರಿಸಿಲ್ಲ.

ಇನ್ನು ಜೆಡಿಎಸ್‌ ಪಕ್ಷವೂ ಕೂಡ ತನ್ನ ಪಂಚರತ್ನ ಯೋಜನೆಯಡಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಾರಿಗೆ ನೌಕರರ ಬೇಡಿಕೆಯಂತೆ ಸಂಸ್ಥೆಯ ನೌಕರರಿಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗ ಜಾರಿಯಾದಾಗ ಯಥಾವತ್ತಾಗಿ ಅಳವಡಿಸುವ ಜತೆಗೆ ನಗದು ರಹಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಇನ್ನು ಕಾಂಗ್ರೆಸ್‌ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಅದರಲ್ಲೂ ಪ್ರಮುಖವಾಗಿ ಸಾರಿಗೆ ನಿಗಮಗಳ ಉದ್ಯೋಗಿಗಳ ವೇತನ ಇತ್ಯಾದಿ ಸೌಲಭ್ಯಗಳನ್ನು ಸರ್ಕಾರಿ ಸಮಾನಾಂತರವಾದ ಹುದ್ದೆಗಳ ವೇತನಗಳಿಗೆ ಅನುಗುಣವಾಗಿ, ಆಯಾ ನಿಗಮಗಳ ಆಯವ್ಯಯಗಳ ಪತ್ರಗಳಲ್ಲಿ ಅಡಕವಾಗುವಂತೆ ಕಾರ್ಯಕ್ರಮ ರಚನೆ ಮಾಡಲಾಗುವುದು ಎಂದು ತಿಳಿಸಿದೆ.

ಒಟ್ಟಾರೆ, ಬಿಜೆಪಿಯು ಸಾರಿಗೆ ನೌಕರರು ಮತ್ತು ಅವರ ಕುಟುಂಬ ಹಾಗೂ ಸಂಬಂಧಿಕರ ವೋಟ್‌ಗಳನ್ನು ಗಮನದಲ್ಲಿ ಇಟ್ಟುಕೊಂಡಂತೆ ಕಾಣಿಸುತ್ತಿಲ್ಲ. ಹೀಗಾಗಿ ರಾಜ್ಯದ ಸುಮಾರು 1.25 ಲಕ್ಷ ನೌಕರರು ಮತ್ತು ಅವರ ಕುಟುಂಬ ಸದ್ಯರು ಸೇರಿದಂತೆ 7 ಲಕ್ಷಕ್ಕೂ ಹೆಚ್ಚು ವೋಟ್‌ಗಳನ್ನು ಕಳೆದುಕೊಳ್ಳುವಂತೆ ಕಾಣುತ್ತಿದೆ.

ಆದರೆ ಈ ಬಿಜೆಪಿಯ ನಡೆಯಿಂದ ಸಾರಿಗೆ ನೌಕರರು ಮತ್ತು ಅಧಿಕಾರಿಗಳು ಅಸಮಾಧಾನಗೊಂಡಿರುವುದರ ಲಾಭ ಪಡೆಯಲು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸಾರಿಗೆ ನೌಕರರಿಗೆ ಪ್ರತ್ಯೇಕವಾಗಿ ಭರವಸೆ ನೀಡಿದ್ದು, ನೌಕರರ ಸಮಸ್ಯೆ ಸ್ಪಂದಿಸುವ ಭರವಸೆ ನೀಡಿವೆ.

ನೌಕರರ ಮನಸ್ಸಿನ ಭಾವನೆಗಳನ್ನು ಅರಿತುಕೊಂಡಿರುವ ಜೆಡಿಎಸ್‌ ನೌಕರರು ಅವರ ಕುಟುಂಬ ಸದಸ್ಯರ 7 ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆಯುವುದಕ್ಕೆ ಮುಂದಾಗಿದೆ. ಅದರಂತೆ ಕಾಂಗ್ರೆಸ್‌ ಕೂಡ ನಾವೇನು ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರಣಾಳಿಕೆಯಲ್ಲಿ ಸಾರಿಗೆ ನೌಕರರಿಗೆ ಸರಿಸಮಾನ ವೇತನ ಕೊಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಅಳವಡಿಸಿ ಕೊಂಡಿದೆ.

ಒಟ್ಟಾರೆ, ಬಿಜೆಪಿ ಹೊರತುಪಡಿಸಿ ಉಳಿದ ಎರಡೂ ಪಕ್ಷಗಳು ಚುನಾವಣೆಯಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬದವರ ವೋಟ್‌ಗಳನ್ನು ಪಡೆಯುವುದಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದು, ಈ ಎರಡೂ ಪಕ್ಷಗಳು ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೊಳಿಸುವ ಬಗ್ಗೆ ನೀಡಿರುವ ಭರವಸೆಯಿಂದ ನೌಕರರು ಯಾರ ಕೈ ಹಿಡಿಯುವರೋ ಎಂಬುದರ ಬಗ್ಗೆ ಇದೇ ಮೇ 13ರವರೆಗೂ ಕಾದು ನೋಡಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ