NEWSನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿಯವರಿಗೇ ರಜೆ ಕೊಡುವ ಮಹಾಪುರಷ ಯಾರು ಸ್ವಾಮಿ…!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಹೇಳಿದ್ದಾರೆ.

ಆದರೆ, ಪ್ರಧಾನಿಯವರು ಯಾವ ಖಾಸಗಿ ಅಥವಾ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಹಾಜರಿ ನೋಡಿ ವೇತನಕೊಡುತ್ತಿರುವ ಮಾಲೀಕರು ಯಾರು ಎಂದು ಸಾಮಾನ್ಯ ಜನರು ಕೇಳುತ್ತಿದ್ದಾರೆ.

ಅಂದಹಾಗೆ ಇವರು ಎಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದಿರಿ ಭಾನುವಾರವು ಇವರ ಕಚೇರಿ ತೆರೆದಿರುತ್ತದೆಯೇ. ಇವರು ತಮ್ಮ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೆ ಪ್ರತಿದಿನವೂ ಕಚೇರಿಗೆ ಬಂದು ಸಹಿ ಮಾಡಿ ನಂತರ ಕೆಲಸಕ್ಕೆ ರಿಪೋರ್ಟ್‌ ಮಾಡಿಕೊಳ್ಳುತ್ತಿದ್ದಾರೆಯೇ ಎಂಬುದನ್ನು ದಯಮಾಡಿ ತಿಳಿಸಿ ಸ್ವಾಮಿ ಎಂದು ನಟ ಅನಂತ್ ನಾಗ್ ಅವರಲ್ಲಿ ಮನವಿ ಮಾಡಿದ್ದಾರೆ.

ಇನ್ನು ನೀವು ಮೋದಿ ಭಕ್ತ’ ಎಂದು ಹೇಳಿಕೊಳ್ಳುವುದು ನಿಮ್ಮ ವೈಯಕ್ತಿಕ ವಿಚಾರ, ಅದರ ಬಗ್ಗೆ ನಮ್ಮದೇನು ತಕಾರರು ಇಲ್ಲ. ಆದರೆ ಮೋದಿಯವರಿಗೆ ರಜೆ ಕೊಡುವ ಮಹಾ ನಾಯಕ ಯಾರು ಎಂದು ತಿಳಿದುಕೊಳ್ಳುವ ಕುತೂಹಲವನ್ನು ನಾವು ತಡೆದುಕೊಳ್ಳಲು ಆಗುತ್ತಿಲ್ಲ, ಹೀಗಾಗಿ ದಯಮಾಡಿ ಪ್ರಧಾನಿಯವರಿಗೇ ರಜೆ ಕೊಡುವ ಮಹಾಪುರುಷರ ಹೆಸರೇಳುತ್ತೀರಾ ಎಂದು ಕೇಳುತ್ತಿದ್ದಾರೆ.

ನಟ ಅನಂತ್ ನಾಗ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವೇ ನಮಗೆ ಸ್ಫೂರ್ತಿ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ ಎಂದು ಹೇಳಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ