CrimeNEWSನಮ್ಮಜಿಲ್ಲೆ

ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್. ನಗರದ ಗೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ನಿಸರ್ಗ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಸರ್ಗ ಆತ್ಮಹತ್ಯೆಗೂ ಮುನ್ನ ನನ್ನ ಸಾವಿಗೆ ಅನನ್ಯ, ಸುಹಾಸ್ ಹಾಗೂ ಆತನ ತಂದೆ ಗೋಪಾಲಕೃಷ್ಣ ಕಾರಣ ಎಂದು ಡೆತ್​ ನೋಟ್​ ಬರೆದಿಟ್ಟಿದ್ದಾರೆ.

ನಾಲ್ಕು ವರ್ಷದ ಪ್ರೀತಿ: ನಿಸರ್ಗ ಕೆ.ಆರ್. ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಸುಹಾಸ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. 4 ವರ್ಷದಿಂದ ಪ್ರೀತಿಸಿ ಎಲ್ಲ ಕಡೆ ಸುತ್ತಾಡಿದ್ದರು. ಆದರೆ ಸುಹಾಸ್​ ನಿಸರ್ಗಳಿಗೆ ಕೈಕೊಟ್ಟು ಮತ್ತೊಬ್ಬ ಯುವತಿಯ ಪ್ರೀತಿಗೆ ಬಿದ್ದಿದ್ದನು.

ಇದರಿಂದ ಮನನೊಂದಿದ್ದ ನಿಸರ್ಗ ಸುಹಾಸ್ ತಂದೆ ತಾಯಿಗೆ ವಿಚಾರ ಹೇಳಿದರೂ ಸ್ಪಂದಿಸಲಿಲ್ಲ. ಈ ವಿಚಾರವಾಗಿ ಅವಮಾನಿಸದರೆಂದು ನಿಸರ್ಗ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ. ನನ್ನ ಸಾವಿಗೆ ಅನನ್ಯ, ಸುಹಾಸ್ ಹಾಗೂ ತಂದೆ ಆತನ ಗೋಪಾಲಕೃಷ್ಷ ಕಾರಣ. ಅವರನ್ನು ಸುಮ್ಮನೆ ಬಿಡಬೇಡಿ ಅಪ್ಪ, ನನ್ನನ್ನು ಕ್ಷಮಿಸಿಬಿಡಿ ಎಂದು ಯುವತಿ ವಿಷ ಸೇವಿಸಿದ್ದಾಳೆ.

ರೀಲ್ಸ್ ಮಾಡಿದ ನಿಸರ್ಗ: ಇನ್ನು ಈ ಮುನ್ನ ನಿಸರ್ಗ ಕೈ ಕೊಯ್ದುಕೊಂಡು ರೀಲ್ಸ್ ಮಾಡಿದ್ದಾಳೆ. ಬಳಿಕ ವಿಷ ಸೇವಿಸಿದ್ದಾಳೆ. ನಂತರ ಈ ವಿಚಾರ ಮನೆಯವರಿಗೆ ತಿಳಿಯುತ್ತಿದ್ದಂತೆ ನಿಸರ್ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಈ ಪ್ರಕರಣ ಸಂಬಂಧ ಐವರ ವಿರುದ್ಧ ಕೆ.ಆರ್. ನಗರ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು