CrimeNEWSದೇಶ-ವಿದೇಶ

ಫುಟ್‌ಪಾತ್ ಮೇಲಿದ್ದ ಕಂಬಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ: ಶಾಸಕರ ಪುತ್ರ ಸೇರಿ 7ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಡರಾತ್ರಿ ಕೋರಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ಹೊಸೂರು ಶಾಸಕ ಪ್ರಕಾಶ್ ಅವರ ಪುತ್ರ ಅರುಣಾಸಾಗರ್ ಹಾಗೂ ಭಾವಿ ಪತ್ನಿ ಬಿಂದು ಸೇರಿ ಏಲು ಮಂದಿ ಮೃತಪಟ್ಟಿದ್ದಾರೆ.

ತಡ ರಾತ್ರಿ 1.30ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ನಡೆದ ಅವಘಡದಲ್ಲಿ ಕರುಣಾಸಾಗರ, ಬಿಂದು (28) ಇಶಿತಾ (21), ಡಾ.ಧನುಶಾ (21), ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ (23) ಮೃತಪಟ್ಟವರು.

ಅರುಣಾಸಾಗರ್ ಸ್ನೇಹಿತರ ಜೊತೆ ಕೋರಮಂಗಲದ ಝೋಲೋ ಪಿಜಿಯಲ್ಲಿ ಉಳಿದುಕೊಳ್ಳುತ್ತಿದ್ದರು. ರಾತ್ರಿ ಪಾರ್ಟಿ ಮಾಡುತ್ತಿದ್ದರು. ಅದೇ ರೀತಿ ಸೋಮವಾರ ರಾತ್ರಿ ಸಹ ಪಾರ್ಟಿ ಮುಗಿಸಿ ಬರುವಾಗ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ಕೆಎ 03 ಎಂವೈ 6666 ನಂಬರಿನ ಆಡಿ ಕ್ಯೂ 3 ಕಾರು ವೇಗವಾಗಿ ಬಂದು ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಇದ್ದ ಸಾವನ್ನಪ್ಪಿದ್ದಾರೆ. 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಎಲ್ಲರೂ 25-30ರ ವಯೋಮಾನದವರು.

ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣದಡಿ ದೂರು ದಾಖಲಾಗಿದೆ. ಸಾವನ್ನಪ್ಪಿರುವ ಎಲ್ಲರ ಮಾಹಿತಿ ಲಭ್ಯವಾಗಿದೆ. ದಂಪತಿ, ಉಳಿದಂತೆ ಒಬ್ಬರು ಹರಿಯಾಣ ಮೂಲದವರು, ಹುಬ್ಬಳಿ ಮೂಲದವರು ಇಬ್ಬರು ಇದ್ದರು. ಅಕ್ಷಯ್ ಗೋಯಲ್ ಕೇರಳ ಮೂಲದವರು, ಉತ್ಸವ್ – ಹರ್ಯಾಣ, ರೋಹಿತ್ – ಹುಬ್ಬಳ್ಳಿ, ಕರುಣಾ ಸಾಗರ್ ಹೊಸೂರು ಮೂಲದವರು. ಉಳಿದವರು ಕೋರಮಂಗಲದ ಜೋಲೋ ಸ್ಟೇ ಪಿಜಿಯಲ್ಲಿ ವಾಸವಿದ್ದರು.

ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಈ ಕುರಿತು ಮಾಹಿತಿ ನೀಡಿದ್ದು, ಆಡಿ ಕಾರು ನೇರವಾಗಿ ಪುಟ್ ಪಾತ್ ಮೇಲೆ ಹತ್ತಿ, ರಭಸವಾಗಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ, ಹೀಗಾಗಿ ಏರ್ ಬ್ಯಾಗ್ ಓಪನ್ ಆಗಿಲ್ಲ. ಕಾರು ನಜ್ಜುಗುಜ್ಜಾಗಿದ್ದು, ಏಳು ಜನ ಸಾವನ್ನಪ್ಪಿದ್ದಾರೆ.

ನಮಗೆ ಸಿಕ್ಕಿರುವ ವಿಳಾಸವನ್ನು ಖಚಿತ ಪಡಿಸಿಕೊಳ್ಳಲಾಗಿದೆ. ಮೇಲ್ನೋಟಕ್ಕೆ ನಿರ್ಲಕ್ಷ್ಯದ ಚಾಲನೆ ಘಟನೆಗೆ ಕಾರಣವಾಗಿದೆ. ನಿರ್ಲಕ್ಷ್ಯದ ಚಾಲನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಮೇಲ್ನೋಟಕ್ಕೆ ಸಂಚಾರಿ ನಿಯಮ ಸಂಪೂರ್ಣವಾಗಿ ಉಲ್ಲಂಘನೆ ಆಗಿದೆ ಎಂದು ತಿಳಿಸಿದರು.

ಕೋರಮಂಗಲದಲ್ಲಿ ನಡೆದಿರುವ ಐಷಾರಾಮಿ ಆಡಿ ಕಾರು ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಕಾರಿನ ಟೈರ್ ರಸ್ತೆಗೆ ಹಾರಿ ಬಂದು ಬಿದ್ದಿದೆ.

ಅಪಘಾತವಾಗಿರುವ ಕಾರು ತಮಿಳುನಾಡಿನ ಸಂಜೀವಿನಿ ಬ್ಲೂ ಮೆಟಲ್ಸ್ ಕಂಪನಿಗೆ ಸೇರಿದ್ದು, 2015ರಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ ನೋಂದಣಿಯಾಗಿದೆ. ಸಂಜೀವಿನಿ ಬ್ಲೂ ಮೆಟಲ್ಸ್ ಕಂಪನಿ ಹೊಸೂರು ರಸ್ತೆಯಲ್ಲಿದೆ. ಹಾಲೋ ಬ್ರಿಕ್ಸ್, ಎಂ ಸ್ಯಾಂಡ್ ಮರಳು ತಯಾರಿಸುವ ಕಂಪನಿ ಇದಾಗಿದೆ. ಕಂಪನಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೂಡ ಬ್ರಾಂಚ್ ಹೊಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು