CrimeNEWSಬೆಂಗಳೂರು

ಫಿಲ್ಮ್‌ ಸ್ಟೈಲ್‍ನಲ್ಲಿ 15 ಕಿಮೀ ಚೇಸ್‌ ಮಾಡಿ ಭ್ರಷ್ಟ ಅಧಿಕಾರಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಂಚ ಪಡೆಯುತ್ತಿದ್ದ ಭ್ರಷ್ಟ ಸರ್ಕಾರಿ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಫಿಲ್ಮ್‌ ಸ್ಟೈಲ್‍ನಲ್ಲಿ 15 ಕಿ.ಮೀ ಚೇಸಿಂಗ್ ಮಾಡಿ ಹಿಡಿರುವ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ.

ಭ್ರಷ್ಟ ಅಂದಿಕಾರಿ ಮಹಂತೇಗೌಡ ಎಂಬುವರೆ ಲೋಕಾಯುಕ್ತದಿಂದ ತಪ್ಪಿಸಿಕೊಂಡು 15 ಕಿ.ಮೀ. ಹೋಗಿದ್ದವರು. ಆದರೂ ಬಿಡದೆ ಅವರನ್ನು ಹಿಂಬಾಳಿಸಿಕೊಂಡು ಹೋಗಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ: ರಂಗದಾಮಯ್ಯ ಎಂಬುವವರು ಕೆ.ಜಿ.ಸರ್ಕಲ್ ಬಳಿಯಿರುವ ತಹಸೀಲ್ದಾರ್ ಕಚೇರಿಯ ಫುಡ್ ಇನ್‍ಸ್ಪೆಕ್ಟರ್ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಈ ವೇಳೆ ಅಧಿಕಾರಿ ಒಂದು ಲಕ್ಷ ರೂ. ಲಂಚ ಕೇಳಿದ್ದ. ಮುಂಗಡವಾಗಿ 43 ಸಾವಿರ ರೂ. ಪಡೆಯುತ್ತಿದ್ದ.

ಈ ವೇಳೆ ಲೋಕಾಯುಕ್ತ ತಂಡ ಸ್ಥಳಕ್ಕೆ ತೆರಳಿದೆ. ಹಣ ಪಡೆದ ಅಧಿಕಾರಿ, ಇದು ಲೋಕಾಯುಕ್ತರ ಟ್ರ್ಯಾಪ್​ ಎಂದು ತಿಳಿದು ಕೂಡಲೇ ಕಾರಿನಲ್ಲಿ ಎಷ್ಕೇಪ್​ ಆಗಲು ಪ್ರಯತ್ನಿಸಿದ್ದಾನೆ. ಲೋಕಾಯುಕ್ತರ ಕೈಗೆ ಸಿಗದೇ ಕಾರಿನಲ್ಲಿ ಸುಮಾರು 15 ಕಿ.ಮೀ. ವರೆಗೆ ತಪ್ಪಿಸಿಕೊಂಡು ಹೋಗಿದ್ದಾನೆ.

ಆದರೆ ಲೋಕಾಯುಕ್ತರು ಫಿಲಂ ಸ್ಟೈಲ್​ನಲ್ಲಿ ಚೇಸ್ ಮಾಡಿ ನೆಲಮಂಗಲ ಬಳಿಯ ಸೊಂಡೇ‌ಕೊಪ್ಪ ಸಮೀಪ ಭ್ರಷ್ಟ ಅಧಿಕಾರಿಯ ಕಾರಿಗೆ ಮುಂದೆ ಬಂದು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರು ಅಲ್ಲಿಗೆ ನಿಂತಿದ್ದರಿಂದ ಅಧಿಕಾರಿಯನ್ನು ವಶಕ್ಕೆ ಪಡೆದು ಲೋಕಾಯುಕ್ತರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು