NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ: ಶೀಘ್ರದಲ್ಲೇ ಮತ್ತೆ 921 ಎಲೆಕ್ಟ್ರಿಕ್ ಬಸ್‌ಗಳು ರಾಜಧಾನಿ ರಸ್ತೆಗೆ : ಮಾಧುಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿಯಲ್ಲಿ ಸಿಇಎಸ್ಎಲ್ ಟೆಂಡರ್ ಕಂಪನಿ ಮೂಲಕ ಒಟ್ಟು 921 ಹವಾ ನಿಯಂತ್ರಣ ರಹಿತ ಎಲೆಕ್ಟ್ರಿಕ್ ಹೊಸದಾಗಿ ಬಸ್‌ಗಳು ಮುಂದಿನ ದಿನಗಳಲ್ಲಿ ಓಡಾಡಲಿವೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಸಜೆ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ಹೊಸ 921 ಹವಾ ನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹೀಗಾಗಿ ರಾಜ್ಯ ರಾಜಧಾನಿಗೆ 921 ಬಸ್‌ಗಳನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದ್ದು, ಅದಕ್ಕಾಗಿ ಸಹಾಯ ಧನವನ್ನೂ ನೀಡಲಿದೆ ಎಂದರು.

ಇನ್ನು ಈ ಬಸ್‌ಗಳಿಗೆ ರಾಜ್ಯ ಸರ್ಕಾರವೂ ಕೂಡ ಧನಸಹಾಯ ನೀಡಲಿದ್ದು, ಇದನ್ನು ಬಳಸಿಕೊಂಡು ಬಿಎಂಟಿಸಿ ಈ ಬಸ್‌ಗಳನ್ನು ಸಿಇಎಸ್‌ಎಲ್ ಮೂಲಕ ಕಾರ್ಯಚರಣೆ ನಡೆಸಲಿವೆ ಎಂದರು.

ಒಂದು ಎಲೆಕ್ಟ್ರಿಕ್ ಬಸ್‌ಗೆ ಸರಿ ಸುಮಾರು 1.50 ಕೋಟಿ ರೂ. ಇದೆ. ಅದರನ್ವಯ ಕೇಂದ್ರ ಸರ್ಕಾರ ಪ್ರತಿ ಬಸ್‌ಗೆ 39.08 ಲಕ್ಷ ರೂ.ಸಹಾಯಧನ ನೀಡಲಿದೆ. ಕೇಂದ್ರ ಈ ಹಣವನ್ನು ಬಸ್‌ ಒದಗಿಸುವ ಕಂಪನಿಗೆ ನೀಡಲಿದೆ ಎಂದರು.

ಇನ್ನು ಬಾಕಿ ಮೊತ್ತವನ್ನು ಸಿಇಎಸ್‌ಎಲ್‌ ಟೆಂಡರ್ ಕಂಪನಿಯೇ ಭರಿಸಿ ಬಸ್‌ ಖರೀದಿ ಮಾಡಲಿದೆ. ಬಿಎಂಟಿಸಿ ಪ್ರತಿ ಕಿ.ಮೀಗೆ 40ರೂ. ನಿಗದಿ ಮಾಡಿದ್ದು, ಆ ಮೊತ್ತವನ್ನು ಸಿಇಎಸ್ಎಲ್‌ಗೆ ನೀಡಲಾಗುತ್ತದೆ. ಚಾಲಕನನ್ನು ಕಂಪನಿಯೇ ಒದಗಿಸುತ್ತದೆ. ನಿರ್ವಾಹಕರು ಮಾತ್ರ ಬಿಎಂಟಿಸಿ ನಿಗದವರು ಇರಲಿದ್ದಾರೆ ಎಂದು ವಿವರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ