NEWSಕೃಷಿನಮ್ಮಜಿಲ್ಲೆ

ಬೆಂ.ಗ್ರಾಮಾಂತರ: ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿಪಡಿಸಿ ಜಿಲ್ಲಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 3500 ರೂ. ಗಳಿಂದ 4 ಸಾವಿರ ರೂ.ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಗಳ ರೈತರಿಂದ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಂಪನಿಗಳ ದೊಡ್ಡ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ನಿಗದಿತ 3350 ರೂ. ಹಾಗೂ ಸಣ್ಣ ಯಂತ್ರಗಳಿಗೆ 2700 ರೂ.ಬಾಡಿಗೆ ಮಾತ್ರ ಪಡೆಯುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 57370 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಆವರಿಸಿದೆ. ಈಗ ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದೆ. ಕಟಾವು ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವ ಕಾರ್ಯವನ್ನು ಯಂತ್ರಗಳ (combined harvesters) ಮೂಲಕ ಕೈಗೊಳ್ಳುತ್ತಿದ್ದಾರೆ‌.

ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ಜುಲೈ 6 ರಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ) ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ, ಪ್ರಸ್ತುತ ಇಂಧನ ವೆಚ್ಚ, ಕಾರ್ಮಿಕರ ಕೂಲಿ ವೆಚ್ಚ ಮತ್ತು ಇತರ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2700 ರೂ. ಪರಿಷ್ಕರಿಸಿ ಬಾಡಿಗೆ ನಿಗದಿಪಡಿಸಲಾಗಿದೆ.

ಈ ದರಗಳನ್ನು ಮೀರದಂತೆ ಬಾಡಿಗೆಯನ್ನು ಪಡೆಯಬೇಕು. ತಪ್ಪಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ