CrimeNEWSನಮ್ಮಜಿಲ್ಲೆ

ಬೆಂಗಳೂರು ಬಂದ್‌ಗೆ ನಿಯೋಜನೆಗೊಂಡ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಗೆ ಕೊಟ್ಟ ಆಹಾರದಲ್ಲಿ ಸತ್ತ ಇಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಬಂದ್‌ಗಾಗಿ ನೇಮಿಸಿದ್ದ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಗೆ ಕಳಪೆ ಆಹಾರ ಪೂರೈಸಿದ ಘಟನೆ ಬೆಳಕಿಗೆ ಬಂದಿದೆ. ಯಶವಂತಪುರ ಸರ್ಕಲ್‌ನಲ್ಲಿ ಕೆಲಸ ಮಾಡೋ ಪೊಲೀಸರಿಗೆ ಕೊಟ್ಟಿರುವ ಬಿರಿಯಾನಿಯಲ್ಲಿ ಸತ್ತ ಇಲ್ಲಿಯೊಂದು ಪತ್ತೆಯಾಗಿದೆ.

ಇನ್ನು ಅದೃಷ್ಟವಶಾತ್ ಯಾರೂ ಕೂಡ ಆ ಕಳಪೆ ಊಟವನ್ನು ಸೇವಿಸಿಲ್ಲ. ಒಂದು ವೇಳೆ ಇಲಿ ಸತ್ತುಬಿದ್ದಿದ್ದ ಆ ಊಟ ಸೇವಿಸಿದ್ರೆ ಅನಾಹುತ ಆಗೋ ಸಾಧ್ಯತೆ ಇತ್ತು ಎನ್ನಲಾಗಿದೆ. ಹೌದು! ತಮಿಳುನಾಡಿಗೆ ನೀರು ಬಿಡುತ್ತಿರೋದನ್ನು ವಿರೋಧಿಸಿ ರೈತರು, ಕನ್ನಡ ಪರ ಹೋರಾಟಗಾರರು ಇವತ್ತು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದಾರೆ.

ಬೆಂಗಳೂರು ಬಂದ್ ಹಿನ್ನೆಲೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಹೋರಾಟದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ನಗರದಲ್ಲಿ ಟೈಟ್ ಸೆಕ್ಯೂರಿಟಿ ಎಷ್ಟಿದೆ ಅಂದ್ರೆ ಕೆಲವಡೆ ಪ್ರತಿಭಟನಾಕಾರರಿಗಿಂತ ಪೊಲೀಸ್ ಸಿಬ್ಬಂದಿಯ ಸಂಖ್ಯೆಯೇ ಹೆಚ್ಚಾಗಿದೆ. ಇಂಥ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನು ಕಷ್ಟಪಟ್ಟು ಸಾರ್ವಜನಿಕರ ಭದ್ರತೆಗಾಗಿ ದುಡಿಯುತ್ತಿರುವ ಪೊಲೀಸರಿಗೆ ಕಳಪೆ ಆಹಾರ ಪೂರೈಕೆ ಮಾಡಿರೋದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಬಂದ್ ಹಿನ್ನೆಲ ಅಶೋಕ್ ಟಿಫಿನ್ ಸೆಂಟರ್‌ನವರು 180 ಊಟ ಕೊಟ್ಟಿದ್ದಾರೆ. ಅದರಲ್ಲಿ ಇಲಿ ಇರೋದು ಪತ್ತೆಯಾಗಿದೆ. ಊಟದಲ್ಲಿ ಇಲಿ ಕೊಟ್ಟ ಹೊಟೇಲ್ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ.

ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಇಲಿ ಇದ್ದ ಊಟ ಕೊಟ್ಟ ವಿಚಾರಕ್ಕೆ ಸಂಚಾರಿ ಕಮಿಷನರ್ ಎಂ.ಎನ್‌. ಅನುಚೇತ್‌ ಗರಂ ಆಗಿದ್ದಾರೆ. ಊಟ ಸಪ್ಲೈ ಮಾಡಿದ ಹೊಟೇಲ್‌ನವರಿಗೆ ಎಂ.ಎನ್ ಅನುಚೇತ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಎರಡು ಹೊತ್ತಿನ ಊಟಕ್ಕೆ ರಾಜ್ಯ ಸರ್ಕಾರ 200 ರೂಪಾಯಿ ಖರ್ಚು ಮಾಡುತ್ತೆ. ಇಷ್ಟಾದರೂ ಒಳ್ಳೆ ಗುಣಮಟ್ಟದ ಊಟ ಯಾಕೆ ಕೊಟ್ಟಿಲ್ಲ ಎಂದು ಅನುಚೇತ್ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಯಶವಂತಪುರ ಸಂಚಾರ ಮತ್ತು ಟ್ರಾಫಿಕ್ ಇನ್ಸ್‌ಪೆಕ್ಟರ್‌ಗಳಿಗೆ ನೊಟೀಸ್ ನೀಡಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು