NEWSನಮ್ಮಜಿಲ್ಲೆಸಂಸ್ಕೃತಿ

ಬೆಂಗಳೂರು ರೌಂಡ್ಸ್‌ಗಾಗಿ ಮೆಜೆಸ್ಟಿಕ್‌ನಿಂದ ಬೆಂಗಳೂರು ದರ್ಶಿನಿ ಹವಾನಿಯಂತ್ರಿತ ಬಸ್‌ಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಪ್ರಯಾಣಿಕರಿಗೆ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೆ ಈ ಕೆಳಕಂಡ ಮಾರ್ಗಗಳಲ್ಲಿ ಹವಾನಿಯಂತ್ರಿತ ಸಾರಿಗೆಯನ್ನು ಪ್ರಾರಂಭಿಸಲಾಗಿದೆ.

ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಲ್ಲಿ ಮಾರ್ಗ ಸಂಖ್ಯೆ ವಿ-365 – ಹವಾನಿಯಂತ್ರಿತ ಬಸ್‌ ಕೆಂಪೇಗೌಡ ಬಸ್ ನಿಲ್ದಾಣದಿಂದ ಬನ್ನೇರುಘಟ್ಟ ನ್ಯಾಷನಲ್ಪಾರ್ಕ್ ಕಾರ್ಪೋರೇಷನ್, ಶಾಂತಿನಗರ ಬಸ್ ನಿಲ್ದಾಣ,ಗುರಪ್ಪನಪಾಳ್ಯ, ಗೊಟ್ಟಿಗೆರೆ ಮಾರ್ಗವಾಗಿ ಚಲಿಸಲಿದ್ದು, ವಾರದ ಮೂರು ದಿನಗಳಲ್ಲಿ ಸಂಚರಿಸಲಿದೆ. ಆ ದಿನಗಳಲ್ಲಿ ನಿತ್ಯ 12 ಸುತ್ತುವಳಿಗಳು ಇರಲಿವೆ.

ಈ ಬಸ್‌ ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 07:30, 08:00, 08:30, 13.15, 14:15, 15:15ಕ್ಕೆ ನಿರ್ಗಮಿಸಲಿದೆ. ಅದರಂತೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಿಂದ ಬೆಳಗ್ಗೆ 9:15, 10:30, 11:30, 17:00, 17:30, 18 ಗಂಟೆಗೆ ನಿರ್ಗಮಿಸಲಿದೆ.

ಬೆಂಗಳೂರು ದರ್ಶಿನಿ-01 ನಂ.ನ ಹವಾನಿಯಂತ್ರಿತ ಬಸ್‌ ಕೆಂಪೇಗೌಡ ಬಸ್ ನಿಲ್ದಾಣ-ಇಸ್ಕಾನ್ ದೇವಾಲಯ, ವಿಧಾನಸೌಧ, ಟಿಪ್ಪು ಪ್ಯಾಲೇಸ್, ಗವಿಗಂಗಾಧರೇಶ್ವರ ದೇವಸ್ಥಾನ, ಬುಲ್ ಟೆಂಪಲ್, ದೊಡ್ಡಗಣಪತಿ ದೇವಸ್ಥಾನ, ಕರ್ನಾಟಕ ಸಿಲ್ಕ್ ಎಂಪೋರಿಯಂ.

ಎಂ.ಜಿ.ರಸ್ತೆ, ಹಲಸೂರು ಕೆರೆ, ಕಬ್ಬನ್ ಪಾರ್ಕ್, ಸರ್.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂ, ಕರ್ನಾಟಕ ಚಿತ್ರಕಲಾ ಪರಿಷತ್ ಕೆಂಪೇಗೌಡ ಬಸ್ ನಿಲ್ದಾಣ ಮಾರ್ಗವಾಗಿ ಸಲಿಸಲಿದೆ. ಕೆಂಪೇಗೌಡ ಬಸ್ ನಿಲ್ದಾಣ ದಿಂದ ಬೆಳಗ್ಗೆ 9 ಗಂಟೆಗೆ ನಿರ್ಗಮಿಸಲಿದ್ದು ಸಂಜೆ 18 ಗಂಟೆಗೆ ಆಗಮಿಸಲಿದೆ.

ಇನ್ನು ಮಾರ್ಗ ಸಂಖ್ಯೆ ವಿ-226 ಎಚ್‍ಎಸ್‍ಆರ್ ಎಚ್.ಎಸ್.ಆರ್. ಬಿಡಿಎ ಕಾಂಪ್ಲೆಕ್ಸ್‍ವಂಡರ್‍ಲಾ ಬಿಟಿಎಂ ಲೇಔಟ್, ರಾಗಿಗುಡ್ಡ, ಬನಶಂಕರಿ ಟಿಟಿಎಂಸಿ, ಪಿಇಎಸ್ ಕಾಲೇಜು, ನಾಯಂಡಹಳ್ಳಿ, ಕೆಂಗೇರಿ ಮಾರ್ಗವಾಗಿ ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಲ್ಲಿ ಚಲಿಸಲಿದೆ.

ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ನಿಂದ ಬೆಳಗ್ಗೆ 9 ಗಂಟೆಗೆ ನಿರ್ಗಮಿಸಲಿದ್ದು, ವಂಡರ್‌ಲಾದಿಂದ ಸಂಜೆ 18:15 ನಿರ್ಗಮಿಸಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು