NEWSನಮ್ಮಜಿಲ್ಲೆ

ಬೆಂಗಳೂರಿನ ಎಲ್ಲೆಡೆ ಸೋಂಕು ನಿವಾರಕ ಔಷಧ ಸಿಂಪಡಣೆ

ಕೊರೊನಾ ಹತೋಟಿಗೆ ಬಿಬಿಎಂಪಿ ಕ್ರಮ l ಮೇಯರ್‌ ಗೌತಮ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ನಿಯಂತ್ರಿಸುವ ಸಲುವಾಗಿ ರಸ್ತೆ ಮಾರ್ಗ, ಮಾರುಕಟ್ಟೆ, ಕಚೇರಿಗಳು, ಸೋಂಕು ಕಂಡು ಬಂದ ಪ್ರದೇಶಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ವಾಹನ ಹಾಗೂ ಡ್ರೋನ್‌ಗೆ ಮೇಯರ್‌ ಗೌತಮ್‌ ಕುಮಾರ್‌ ಜೈನ್‌ ಚಾಲನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರಾದ್ಯಂತ ಸೋಂಕು ನಿವಾರಕ ದ್ರಾವಣ(ಸೋಡಿಯಮ್ ಹೈಪೊ ಕ್ಲೋರೈಡ್) ಸಿಂಪಡಿಸಲು ಕ್ರಮ ವಹಿಸಲಾಗಿದೆ ಎಂದು ಮೇಯರ್‌ ತಿಳಿಸಿದರು.

ನಾಗರೀಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಪಾಲಿಕೆಯು ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ವಾರ್ಡ್‌ಗಳಲ್ಲಿ ಸಿಬ್ಬಂದಿ ಹಾಗೂ ಟ್ರ್ಯಾಕ್ಟರ್ ಗಳಲ್ಲಿ ಡ್ರಮ್‌ಗಳನ್ನಿಟ್ಟು ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುತ್ತಿದೆ. ಅದರ ಜೊತೆಗೆ ಇಂದಿನಿಂದ ಜಲಮಂಡಳಿಯಿಂದ 7 ಸಾವಿರ ಲೀಟರ್ ಸಾಮರ್ಥ್ಯದ 10 ಜೆಟ್ಟಿಂಗ್ ಯಂತ್ರಗಳನ್ನು ಪಾಲಿಕೆಗೆ ತಾತ್ಕಾಲಿಕವಾಗಿ ಹಸ್ತಾಂತರಿಸಿಕೊಳ್ಳಲಾಗಿದ್ದು, ನಗರಾದ್ಯಂತ ಸಿಂಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಜೆಟ್ಟಿಂಗ್ ಯಂತ್ರಗಳ ಮೂಲಕ ಹಡ್ಸನ್ ವೃತ್ತ, ಟೌನ್ ಹಾಲ್, ಕೆ.ಆರ್.ಮಾರುಕಟ್ಟೆ ಸೇರಿದಂತೆ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ಸೋಂಕು ನಿವಾರಕ ಸಿಂಪಡಿಸಲಾಗುತ್ತದೆ. ಇದಲ್ಲದೆ ಡ್ರೋನ್ ಮೂಲಕ ಸೋಂಕು ನಿವಾರಕ ಸಿಂಪಡಿಸಲು ಕ್ರಮವಹಿಸಲಾಗುತ್ತಿದೆ. ಅಗ್ನಿ ಶಾಮಕ ವಾಹನಗಳನ್ನೂ ಸೋಂಕು ನಿವಾರಕ ಸಿಂಪಡಿಸಲು ನಿಯೋಜಿಸಿಕೊಳ್ಳಲಾಗುತ್ತಿದೆ ಎಂದರು.

ನಗರವನ್ನು ಶುಚಿತ್ವ ಕಾಪಾಡುವ ಸಲುವಾಗಿ ಕಸಗುಡಿಸುವ ಯಂತ್ರಗಳ ಮೂಲಕ ಪ್ರಮುಖ ರಸ್ತೆಗಳನ್ನು ಸ್ವಚ್ಛವಾಗಿರುವಂತೆ ಕ್ರಮವಹಿಸಲಾಗಿದ್ದು, ಮೇಲ್ಸೇತುವೆ, ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ ಎಂದು ಹೇಳಿದರು.

ಆಯುಕ್ತ ಅನಿಲ್‌ ಕುಮಾರ್‌, ವಿಶೇಷ ಆಯುಕ್ತರು(ಘನತ್ಯಾಜ್ಯ) ಡಿ.ರಂದೀಪ್, ಜಂಟಿ ಆಯುಕ್ತರು(ಘನತ್ಯಾಜ್ಯ) ಸರ್ಪರಾಜ್ ಖಾನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ