CrimeNEWSನಮ್ಮಜಿಲ್ಲೆಬೆಂಗಳೂರು

ಬೆಂಗಳೂರಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ – ನಿಷ್ಕ್ರಿಯ ಪೊಲೀಸ್ ಇಲಾಖೆ : ಅನಿಲ್ ನಾಚಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯುವಕನೊಬ್ಬ ಕಚೇರಿಗೆ ಪ್ರವೇಶಿಸಿ  ಮಹಿಳಾ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರಿನ ಖ್ಯಾತಿಗೆ ಮಸಿ ಬಳೆಯುವಂತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಹೇಳಿದರು.

ಈ ಪ್ರಕರಣವನ್ನು ಬೆಳಕಿಗೆ ತಂದ ಅನಿಲ್ ನಾಚಪ್ಪ ವಿಡಿಯೋ ಮತ್ತು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ನಗರದ ಚರ್ಚ್ ಸ್ಟ್ರೀಟ್ ಒಂದರ ಕಚೇರಿಗೆ ಏಕಾಏಕಿ ಪ್ರವೇಶಿಸಿದ ಕಾಮಂದನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ ಎಂದರು.

ಘಟನೆ ನಡೆದ ತಕ್ಷಣವೇ ಹತ್ತಿರದ ಕಬ್ಬನ್ ಪಾರ್ಕ್ ಪೊಲೀಸರಿಗೆ ಕರೆ ಮಾಡಿದರೂ ಜತೆಗೆ ದೂರನ್ನು ನೀಡಿದರು ಸಹ ಪೊಲೀಸರು ತಕ್ಷಣದಲ್ಲಿ ಸಹಕರಿಸದೆ ಕೈ ಚೆಲ್ಲಿ ಕುಳಿತರು. ಸೂಕ್ತ ಸಮಯದಲ್ಲಿ ಸ್ಥಳಕ್ಕೆ ಆಗಮಿಸದೆ ನಂತರ ಒತ್ತಡ ಬಂದಾಗ ನಾಮ್‌ ಕೇ ವಾಸ್ತೆಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ಕಾರ್ಯವನ್ನು ಕೈಗೊಂಡರು.

ಹತ್ತಿರದ ರಸ್ತೆಯಲ್ಲಿ ಇದ್ದ ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲವೆಂದು, ಆರೋಪಿಯನ್ನು ಹಿಡಿಯಲು ಸಾಕಷ್ಟು ಕಷ್ಟವಾಗುತ್ತದೆ ಎಂದು ತಿಳಿಸಿದ ವಿಚಾರ ಬೆಂಗಳೂರು ಪೊಲೀಸರು ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಾಕಷ್ಟು ಬೇಜವಾಬ್ದಾರಿಯನ್ನು ಹೊಂದಿದ್ದಾರೆ ಎಂಬುದು ಸಾಬೀತಾಗುತ್ತದೆ ಎಂದು ತಿಳಿಸಿದರು.

ಅಲ್ಲದೆ ಬೆಂಗಳೂರಿನ ಅನೇಕ ಪ್ರಮುಖ ರಸ್ತೆಗಳಲ್ಲಿ ಸುರಕ್ಷತೆಗಾಗಿ ಹಾಕಿರುವ ಸಿಸಿ ಕ್ಯಾಮೆರಾಗಳು ಸಂಪೂರ್ಣ ನಿಷ್ಕ್ರಿಯವಾಗಿರುವ ವಿಚಾರ ಪೊಲೀಸರಿಂದಲೇ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಯಾವುದೇ ದೂರು ನೀಡಿದರು ಸಿಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂಬ ಉತ್ತರ ಸಿಗುತ್ತದೆ. ಇದು ನಿಜಕ್ಕೂ ಬೆಂಗಳೂರಿನ ಘನತೆಗೆ ಗೌರವ ತರುವಂತದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡಿ ನಗರ ಸುರಕ್ಷತೆಗೆ ಹಾಕಿರುವ ಸಿಸಿ ಕ್ಯಾಮೆರಾಗಳು ಭ್ರಷ್ಟಾಚಾರ ರೂಪದಲ್ಲಿ ಏಜೆನ್ಸಿಗಳು ಹಾಗೂ ಸ್ಥಳೀಯ ರಾಜಕಾರಣಿಗಳ ಪಾಲಾಗುತ್ತಿದೆ. ಬೆಂಗಳೂರಿನ ಜನತೆಗೆ ಈ ಕ್ಯಾಮೆರಾಗಳಿಂದ ಯಾವುದೇ ಸುರಕ್ಷತೆ, ರಕ್ಷಣೆ ಲಭ್ಯವಿಲ್ಲದಂತಾಗಿದೆ. ಕೂಡಲೇ ಗೃಹ ಸಚಿವರು ತನಿಖೆಯನ್ನು ನಡೆಸಿ ಸಿಸಿ ಕ್ಯಾಮೆರಾಗಳ ಕಾರ್ಯ ಶೈಲಿಯನ್ನು ಪರಿಶೀಲಿಸಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು