NEWSನಮ್ಮಜಿಲ್ಲೆನಮ್ಮರಾಜ್ಯ

ಬೀಡನಹಳ್ಳಿ ಗ್ರಾಪಂ ಅಧ್ಯಕ್ಷರ ಚುನಾವಣೆ: ಹೈಡ್ರಾಮ- ಜೆಡಿಎಸ್‌ ಬೆಂಬಲಿತರಾದ ಮಂಜುಳಾ ಅಧ್ಯಕ್ಷರಾಗಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಬೀಡನಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್‌ಬೆಂಬಲಿತ ಗ್ರಾಪಂ ಸದಸ್ಯರಾದ ಮಂಜುಳಾ ಅಧ್ಯಕ್ಷರಾಗಿ ಮತ್ತು ತಿಮ್ಮಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾ ಆಯೋಗದ ನೂತನ ಮೀಸಲಾತಿ ಅನ್ವಯ ಬೀಡನಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು ಶುಕ್ರವಾರ ಚುನಾವಣೆ ನಡೆಯಿತು.

ಈ ವೇಳೆ ಒಟ್ಟು 9 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್‌ಬೆಂಬಲಿತರು 4 ಮತ್ತು ಕಾಂಗ್ರೆಸ್‌ಬೆಂಬಲಿತ ಸದಸ್ಯರು 5 ಮಂದಿ ಇದ್ದಾರೆ. ಆದರೆ ಚುನಾವಣೆಯ ವೇಳೆ ನಡೆದ ಹೈಡ್ರಾಮದಲ್ಲಿ ಜೆಡಿಎಸ್‌ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುಳಾ ಅವರಿಗೆ ಕಾಂಗ್ರೆಸ್‌ಬೆಂಬಲಿತ ಸದಸ್ಯರೊಬ್ಬರು ಮತ ಚಲಾಯಿಸಿದ್ದರಿಂದ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಬೇಕಿದ್ದ ಕಾಂಗ್ರೆಸ್‌ನೆಲಕಚ್ಚಿದೆ.

ಇದರಿಂದ ಕಾಂಗ್ರೆಸ್‌ಬೆಂಬಲಿತ ಅಭ್ಯರ್ಥಿ ಯಶೋದಮ್ಮ 4 ಮತಗಳನ್ನು ಪಡೆದು ಪರಾಭವಗೊಂಡರೆ 5 ಮತಗಳನ್ನು ಪಡೆದ ಮಂಜುಳಾ ಅವರು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಇನ್ನು ಎಸ್‌ಟಿ ಮೀಸಲಾತಿಯಡಿ ತಿಮ್ಮಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.

ಇನ್ನು ಚುನಾವಣೆಯಲ್ಲಿ ಕಾಂಗ್ರೆಸ್‌ಬೆಂಬಲಿತ ಅಭ್ಯರ್ಥಿ ಪರಾಭವಗೊಂಡಿದ್ದರಿಂದ ಅಸಮಾಧಾನಗೊಂಡ ಕಾಂಗ್ರೆಸ್‌ಬೆಂಬಲಿತ ಸದಸ್ಯರು ನಮ್ಮ ಅಭ್ಯರ್ಥಿ ಸೋಲಿಗೆ ಕಾರಣ ಯಾರು ಎಂದು ತಮ್ಮತಮ್ಮಲ್ಲೇ ಆಣೆ ಪ್ರಮಾಣ ಮಾಡಿಕೊಂಡಿದ್ದಾರೆ.

ಜೆಡಿಎಸ್‌ಬೆಂಬಲಿತ ಅಭ್ಯರ್ಥಿ ಮಂಜುಳಾ ಆಯ್ಕೆಗೆ ಸಹಕರಿಸಿದವರು ಯಾರು ಎಂದು ನಮಗೆ ಗೊತ್ತಾಗಬೇಕು ಎಂದು ಬೀಡನಹಳ್ಳಿ ಗ್ರಾಮದ ಶ್ರೀನಂದಿ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ತೀರ್ಥ ತೆಗೆದುಕೊಂಡು ಆಣೆ ಮಾಡಿಸಿದ್ದಾರೆ, ಆದರೆ, ಎಲ್ಲರೂ ನಾವು ಕಾಂಗ್ರೆಸ್‌ಬೆಂಬಲಿತೆ ಯಶೋದಮ್ಮ ಅವರಿಗೆ ಮತ ಚಲಾಯಿಸಿದ್ದೇವೆ ಎಂದು ಆಣೆ ಮಾಡಿದ್ದಾರೆ.

ಆದರೆ, ದೇವಸ್ಥಾನದಲ್ಲಿ ಆಣೆ ಮಾಡಿದಷ್ಟಕ್ಕೇ ಸುಮ್ಮನಾಗದ ಕಾಂಗ್ರೆಸ್‌ಸದಸ್ಯರು ಹಿಟ್ಟನಹಳ್ಳಿ ಕೊಪ್ಪಲು ಸಮೀಪವಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಣೆ, ಉಪ್ಪಿನ ಮೇಲೆಯೂ ಪ್ರಮಾಣ ಮಾಡಿಸಿದ್ದಾರೆ. ಆದರೆ, ಅಲ್ಲಿಯೂ ಕೂಡ ನಾವು ಯಶೋದಮ್ಮ ಅವರಿಗೆ ಮತ ಹಾಕಿದ್ದೇವೆ ಎಂದು ಆಣೆ ಮಾಡಿದ್ದಾರೆ.

ಹೀಗಾಗಿ ಜೆಡಿಎಸ್‌ಬೆಂಬಲಿತ ಅಭ್ಯರ್ಥಿಗೆ ಯಾರು ಮತ ಚಲಾಯಿಸಿದರು ಎಂಬುವುದು ಇನ್ನು ಸ್ಪಷ್ಟವಾಗಿಲ್ಲ. ಆದರೆ, ಕೆಲವರ ಮೇಲೆ ಕಾಂಗ್ರೆಸ್‌ಮುಖಂಡರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಚುನಾವಣೆ ಅಧಿಕಾರಿಯೊಂದಿಗೂ ಮಾತಿನ ಚಕಮಕಿ ನಡೆಯಿತು. ಮತ್ತೆ ಚುನಾವಣೆ ಮಾಡಿ ಎಂದು ಕಾಂಗ್ರೆಸ್‌ಸದಸ್ಯರು ಪಟ್ಟು ಹಿಡಿದಿದ್ದರು. ಆದರೆ ಒಮ್ಮೆ ಚುನಾವಣೆ ನಡೆದಿದ್ದು, ಮತ್ತೊಮ್ಮೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ, ಕಾಂಗ್ರೆಸ್‌ಸ್ಪಷ್ಟ ಬಹುಮತವಿದ್ದರು, ರಾಜಕೀಯ ದೊಂಬರಾಟದಿಂದ ಜೆಡಿಎಸ್‌ಬೆಂಬಲಿತ ಸದಸ್ಯೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಎಸ್‌ಟಿ ಮೀಸಲಾತಿಯಡಿ ಬೇರಾರು ಇಲ್ಲದ ಕಾರಣ ಜೆಡಿಎಸ್‌ಬೆಂಬಲಿತ ಸದಸ್ಯೆ ತಿಮ್ಮಮ್ಮ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು