NEWSಆರೋಗ್ಯನಮ್ಮರಾಜ್ಯ

ಬಾಣಂತಿ, ನವಜಾತ ಶಿಶುಗಳ ಸಾವಿನ ಬಳಿಕ ಎಚ್ಚೆತ್ತ ಇಲಾಖೆ : ತುರ್ತು ಆರೋಗ್ಯ ಸೇವೆಗೆ ಯಾವುದೇ ದಾಖಲೆಗಳ ಅವಶ್ಯವಿಲ್ಲ – ಹೊಸ ಮಾರ್ಗಸೂಚಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ. ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗ ಸೂಚಿ ನೀಡಿದೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಈ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಹೀಗಾಗಿ ಇನ್ನು ಮುಂದೆ ಈ ಮಾರ್ಗಸೂಚಿಯಂತೆ ತುರ್ತು ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅವಶ್ಯವಿರುವುದಿಲ್ಲ ಎಂದು ತಿಳಿಸಿದೆ.

ಮಾರ್ಗಸೂಚಿಯಲ್ಲಿ ಏನಿದೆ?: ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳ ಅವಶ್ಯವಿರುವುದಿಲ್ಲ.

ತಾಯಿ ಕಾರ್ಡ್, ಆಧಾರ್‌ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.

ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.

ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು. ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ