NEWSಕ್ರೀಡೆನಮ್ಮರಾಜ್ಯ

ಬಂದ್‌ ಶಾಕ್‌: ಬಿಎಂಟಿಸಿ ಬಸ್‌ ಹತ್ತಿದ ಸ್ಪಿನ್ ಮಾಂತ್ರಿಕ ಮಾಜಿ ಕ್ರಿಕೆಟರ್ ಅನಿಲ್​ ಕುಂಬ್ಳೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಬಂದ್ ಮಾಡಿದ ಹಿನ್ನೆಲೆಯಲ್ಲಿ ಯೆಲ್ಲೋ ಬೋರ್ಡ್​ ಇರುವ ವಾಹನಗಳನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಈ ಬಂದ್‌ ಬಿಸಿ ಸ್ಪಿನ್ ಮಾಂತ್ರಿಕ ಮಾಜಿ ಕ್ರಿಕೆಟರ್ ಹಾಗೂ ಕನ್ನಡಿಗ ಅನಿಲ್​ ಕುಂಬ್ಳೆ ಅವರಿಗೂ ತಟ್ಟಿದ್ದು, ಪರಿಣಾಮ ಅವರು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿ ಮನೆ ಸೇರಿಕೊಂಡಿದ್ದಾರೆ.

ಹೌದು! ಭಾರತದ ಕ್ರಿಕೆಟ್​ ತಂಡದ ದಿಗ್ಗಜ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಯವರು ಇಂದು ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ.

ಈ ವೇಳೆ ಏರ್​ಪೋರ್ಟ್​ನಿಂದ ತಮ್ಮ ನಿವಾಸಕ್ಕೆ ಹೋಗಬೇಕೆಂದು ಕ್ಯಾಬ್​ಗಳನ್ನು ಹುಡುಕಾಡಿದ್ದಾರೆ. ಆದ್ರೆ ಯಾವುದೇ ಕ್ಯಾಬ್ ಸಿಕ್ಕಿಲ್ಲ. ಹೀಗಾಗಿ ಅನಿಲ್ ಕುಂಬ್ಳೆ ಅವರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣ ಮಾಡಿದ್ದಾರೆ. ​

ಸದ್ಯ ಈ ಬಗ್ಗೆ ತಮ್ಮ ಎಕ್ಸ್​ ಅಕೌಂಟ್​ನಲ್ಲಿ ಫೋಟೋ ಶೇರ್ ಮಾಡಿರುವ ಅನಿಲ್ ಕುಂಬ್ಳೆಯವರು, ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​ ಮೂಲಕ ಮನೆಗೆ ವಾಪಸ್ ಆಗುತ್ತಿದ್ದೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲ ಇದೇ ವೇಳೆ ಬಿಎಂಟಿಸಿ ಕಂಡಕ್ಟರ್‌ಗೆ ಸೆಲ್ಫಿ ಕೊಟ್ಟಿದ್ದು, ಅನಿಲ್ ಕುಂಬ್ಳೆ ಅವರ ಸರಳತೆಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು