NEWSವಿಡಿಯೋ

ಬೀದಿಗೆ ಬಿದ್ದ ಗುಲಾಬಿ ಬೆಳೆಗಾರರು

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ:  ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ  ಹೂ ಬೆಳಗಾರರು ಬೀದಿಗೆ ಬೀಳುವಂತಾಗಿದೆ. ತಾಲೂಕಿನಲ್ಲಿ ಗುಲಾಬಿ, ಜರ್ಬಾರ್,   ಸೆವಂತಿಗೆ  ಹೂ ಗಳನ್ನು  ಬೆಳೆದ ರೈತರು ಕಂಗಾಲಾಗಿದ್ದು ಹೂ ಗಿಡದಲ್ಲೇ ಕೊಳೆಯುತ್ತಿದೆ.

ಕೊರೊನಾ ಲಾಕ್ ಡೌನ್  ಹಿನ್ನೆಲೆಯಲ್ಲಿ  ಯಾವುದೇ ದೇವಾಲಯಗಳು ಶುಭ ಸಮಾರಂಭಗಳು ನಡೆಯದೇ ಇರುವುದರಿಂದ ಹೂ ಮಾರಾಟ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಸಾಲ ಮಾಡಿ ಬಂಡವಾಳ ಹೂಡಿರುವ ರೈತರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸುಮಾರು 10 ಎಕರೆ  ಪ್ರದೇಶದಲ್ಲಿ ಗುಲಾಬಿ, ಜರ್ಬಾರ್, ಸೆವಂತಿಗೆ ಬೆಳೆದ ಮುನಿಕೃಷ್ಣಪ್ಪ ಎಂಬ  ರೈತ  ಬ್ಯಾಂಕ್ನಲ್ಲಿ ಸಾಲ ಮಾಡಿ ಬಂಡವಾಳ ಹೂಡಿಕೆ ಮಾಡಿದ್ದೇವೆ ಆದರೆ ವೈರಸ್ ಕಾರಣದಿಂದ ಹೂಗಳನ್ನು ಯಾರು ಕೊಳ್ಳುತ್ತಿಲ್ಲ ಇದರಿಂದ ಕಿತ್ತು ಎಲ್ಲ ತಿಪ್ಪೆಗೆ ಸುರಿಯುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಸಂಬಂಧಪಟ್ಟ ತೋಟಗಾರಿಕಾ ಅಧಿಕಾರಿಗಳು ಇಂತಹ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತ ಮುನಿಕೃಷ್ಣಪ್ಪ ಮನವಿ ಮಾಡಿದ್ದಾರೆ. ಅಲ್ಲದೇ ಹೂವನ್ನು ಮಾರಲು ಮಾರುಕಟ್ಟೆ ಸೌಲಭ್ಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಕೊರೊನಾ ಮಹಾಮಾರಿಗೆ ಜಗತ್ತೇ ತತ್ತರಿಸಿ ಹೋಗಿದ್ದು, ಒಂದೆಡೆ ವಸ್ತುಗಳ ಬೆಲೆ ಏರಿಕೆಯಾದರೆ ಮತ್ತೊಂದೆಡೆ ರೈತರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಂಡು ರೈತರಿಗೆ ನೆರವಾಗಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ