NEWSದೇಶ-ವಿದೇಶರಾಜಕೀಯವಿಜ್ಞಾನ-ತಂತ್ರಜ್ಞಾನ

ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿ ಬಗ್ಗೆ ಕ್ರಮಕ್ಕೆ ಒತ್ತಾಯ

ಸರ್ಕಾರ ನೀಡಿರುವ ಜಾಗವನ್ನು ನೀಡಿದ ಉದ್ದೇಶಕ್ಕೆ ಬಳಸಿಕೊಳ್ಳದ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವ   ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಬಿವೃದ್ಧಿ ಮಂಡಳಿಯಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್ ಪೇಟೆ 1 ನೇ ಹಂತದ ಕೈಗಾರಿಕಾ ಪ್ರದೇಶದ ನಿವೇಶನ ಸಂಖ್ಯೆ.1 ಮತ್ತು 2-ಪಾರ್ಟ್ ರಲ್ಲಿ ಒಟ್ಟು 149 ಎಕರೆ 5.5 ಗುಂಟೆ ಜಮೀನನ್ನು ಮೆ. ಬಿ.ಪಿ.ಎಲ್ ಲಿ. ಅವರಿಗೆ ಹಂಚಿಕೆ ಮಾಡಲಾಗಿದೆ.  ಈ ಕಂಪನಿಗೆ ಸರ್ಕಾರ ನೀಡಿರುವ ಜಾಗವನ್ನು ನೀಡಿದ ಉದ್ದೇಶಕ್ಕೆ ಬಳಸಿಕೊಳ್ಳಲಾರದ ಆರೋಪವಿದ್ದು ಪ್ರಸ್ತುತ ಅದು ನ್ಯಾಯಾಲಯದಲ್ಲಿದೆ  ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್   ತಿಳಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ನೆಲಮಂಗಲ ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ , ಬಿ.ಪಿ.ಎಲ್ ಕಂಪನಿಗೆ ನೀಡಿರುವ ಜಾಗದ ಕ್ರಯಪತ್ರವನ್ನು ರದ್ದು ಮಾಡಲು ಕಾನೂನಿನ ಮೊರೆ ಹೋಗುವುದಾಗಿ ಹೇಳಿದರು.

ಸದರಿ ಕಂಪನಿಯು ಹಂಚಿಕೆ ಪಡೆದಿರುವ ವಿಸ್ತೀರ್ಣದಲ್ಲಿ ಶೇಕಡಾ 5.12 ರಷ್ಟು ಜಮೀನನ್ನು ಕಟ್ಟಡಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ತಿಳಿಸಿದರು.

ಮೆ.ಬಿ.ಪಿ.ಎಲ್ ಲಿ. ಕಂಪನಿಯು ಹಂಚಿಕೆ ಪಡೆದಿರುವ ವಿಸ್ತೀರ್ಣದಲ್ಲಿ ಶೇಕಡಾ 5.12 ರಷ್ಟು ಜಮೀನನ್ನು ಕಟ್ಟಡಕ್ಕಾಗಿ ಬಳಸಿಕೊಂಡಿರುತ್ತದೆ. ಕೆ.ಐ.ಎ.ಡಿ.ಬಿ.ಯು  2006 ನವೆಂಬರ್‌  28  ರಂದು ಶುದ್ದ ಕ್ರಯಪತ್ರವನ್ನು ಮಾಡಿಕೊಟ್ಟಿದೆ ಎಂದು ಹೇಳಿದರು.

ಕೆ.ಐ.ಎ.ಡಿ.ಬಿ.ಯಿಂದ ಕ್ರಯಪತ್ರ ಪಡೆದ ನಂತರ ಮೆ. ಬಿ.ಪಿ.ಎಲ್ ಲಿ. ಅವರು  ಕೆಲ ಸಂಸ್ಥೆಗಳಿಗೆ ಜಮೀನನ್ನು ಮಾರಾಟ ಮಾಡಿದ್ದು, ಆ  ಕಂಪನಿಗಳ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ