NEWSನಮ್ಮಜಿಲ್ಲೆ

ಬಾರ್‌ ಸ್ಥಳಾಂತರಕ್ಕೆ ಆಗ್ರಹ: ಎಂಟನೇ ದಿನಕ್ಕೆ ಕಾಲಿಟ್ಟ ಮಹಿಳೆಯರ ಧರಣಿ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ವೈನ್‌ ಸ್ಟೋರ್‌ ಸ್ಥಳಾಂತರಿಸಲು ಆಗ್ರಹಿಸಿ ಜಿಲ್ಲೆಯ ಮುಧೋಳ ತಾಲೂಕಿನ ಚನಾಳ ಗ್ರಾಮದಲ್ಲಿ ನಡೆಯುತ್ತಿರುವ ಮಹಿಳೆಯರು ಪ್ರತಿಭಟನಾ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ.

ಚನಾಳ ಗ್ರಾಮದ ಬಳಿಯ ಕಿಂಗ್ಸ್ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರು ಬಾರ್ ಎದುರೇ ಅಡುಗೆ ಮಾಡಿ, ಉಪಾಹಾರ ಸೇವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾರ್​ನಿಂದ ಗ್ರಾಮದ ಯುವಕರು ಹಾಳಾಗುತ್ತಿದ್ದಾರೆ. ಮನೆಯಲ್ಲಿ ನಿತ್ಯವೂ ಜಗಳ ಶುರುವಾಗಿದೆ‌. ಮನೆಯಲ್ಲಿನ ವಸ್ತುಗಳನ್ನು ಕುಡಿಯುವುದಕ್ಕಾಗಿಯೇ ಮಾರಾಟ ಮಾಡುತ್ತಿದ್ದಾರೆ. ನಮ್ಮ ಸಂಸಾರ ಬೀದಿಗೆ ಬರುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರ ಮಾಡಿ. ಬಾರ್ ಸ್ಥಳಾಂತರ ಮಾಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾ ಧರಣಿನಿರತ ಮಹಿಳೆಯರು ಪಟ್ಟು ಹಿಡಿದಿದ್ದಾರೆ.

ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ!: ಒಂದೆಡೆ ಮಹಿಳೆಯರಿಂದ ಬಾರ್ ಮುಚ್ಚುವಂತೆ ಧರಣಿ, ಮತ್ತೊಂದೆಡೆ ಬಾರ್ ಮುಚ್ಚದಂತೆ ಮದ್ಯಪ್ರಿಯರಿಂದ ಧರಣಿ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮ ಅಂಚೆ ಚೋಮನಹಳ್ಳಿಯಲ್ಲಿ ನಡೆದಿದೆ.

ಬಾರ್‌ ಮುಚ್ಚುವಂತೆ ಚಿಕ್ಕಮಗಳೂರು ಅಬಕಾರಿ ಕಚೇರಿ ಬಳಿ ಮಹಿಳೆಯರು ಧರಣಿ ನಡೆಸಿದ್ದಾರೆ. ಆದರೆ, ಇದಕ್ಕೆ ವಿರುದ್ಧವಾಗಿ ಮತ್ತೊಂದೆಡೆ ಬಾರ್ ಮುಚ್ಚದಂತೆ ಮದ್ಯಪ್ರಿಯರಿಂದ ಧರಣಿ ನಡೆದಿದೆ. ಅಬಕಾರಿ ಕಚೇರಿಯ ಬಳಿ ಬಾರ್‌ ಪರ, ವಿರುದ್ಧ ಪ್ರತಿಭಟನೆ ಜೋರಾಗಿದೆ.

ಗ್ರಾಮದಲ್ಲಿ ತಿಂಗಳ ಹಿಂದೆ ಚಂದನ್ ಎಂಬ ಹೆಸರಿನ ಬಾರ್‌ ತೆರೆಯಲಾಗಿದೆ. ಇದೀಗ ಅದಕ್ಕೆ ಮಹಿಳೆಯರಿಂದ ವಿರೋಧ ವ್ಯಕ್ತವಾಗಿದೆ. ಮದ್ಯಪ್ರಿಯರು ಮಹಿಳೆಯರ ವಿರೋಧಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಬಾರ್ ಮುಚ್ಚದಂತೆ ತಾವೂ ಧರಣಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಅಬಕಾರಿ ಕಚೇರಿ ಬಳಿ ಈ ಪ್ರತಿಭಟನೆ ನಡೆದಿದೆ. ಎಣ್ಣೆ ಬೇಕೆಂದು ಒಂದು ಗುಂಪು, ಬೇಡವೆಂದು ಮತ್ತೊಂದು ಗುಂಪು, ಬಾರ್ ಪರ- ವಿರುದ್ದ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದೆ. ಬಾರ್ ಬೇಡವೆಂದು ಮಹಿಳೆಯರು ಬೀದಿಗಿಳಿದಿದ್ದಾರೆ. ಬಾರ್ ಬೇಕೇ ಬೇಕೆಂದು ಮದ್ಯಪ್ರಿಯರು ಬೀದಿಗಳಿದಿದ್ದಾರೆ.

ನನ್ ಗಂಡ ಬೆಳಗ್ಗೆಯಿಂದ ಸಂಜೆ ತನಕ ಕುಡೀತಾನೆ ಇರ್ತಾನೆ ಸರ್. ಕುಡ್ಕೋ ಬಂದು ಹೊಡೀತಾನೆ, ಬಡೀತಾನೆ. ನಮ್ ಕಷ್ಟ ಯಾರಿಗೆ ಹೇಳೋದ್ ಸರ್. ಬಾರ್ ಹತ್ರ ಇದ್ರೆ ನನ್ನ ಗಂಡನ ಕಾಟ ಮತ್ತಷ್ಟು ಜಾಸ್ತಿಯಾಗುತ್ತೆ. ಹಾಗಾಗೀ ಬಾರ್ ಬೇಡ ಅಂತಾ ಡಿಸಿ ಅವ್ರಿಗೆ ಮನವಿ ಮಾಡೋಕೆ ಬಂದೀವಿ ಸರ್ ಎಂದು ಮಹಿಳೆಯರು ಕಣ್ಣೀರು ಹಾಕಿದ್ದಾರೆ.

ಇತ್ತ, ನಾನ್ ಸಂಜೆ 6 ಗಂಟೆಗೆ ಕೆಲ್ಸ ಮುಗ್ಸಿ ಬರ್ತೀನಿ, ಆಮೇಲೆ ಬಾರ್ ಹುಡ್ಕೊಂಡ್ ಬಾಣಾವಾರಕ್ಕೆ ಹೋಗ್ಬೇಕಂದ್ರೆ 10 ಕಿಲೋ ಮೀಟರ್, ಮತ್ತಿಘಟ್ಟಕ್ಕೆ ಹೋಗೋಕೂ 10 ಕೀಲೋ ಮೀಟರ್ ಆಗುತ್ತೆ. ದೇವನೂರು ಹೋಗ್ಬೇಕಂದ್ರೆ 10 ಕೀಲೋ ಮೀಟರ್. ಕುಡಿಬೇಕು ಅಂದ್ರೆ ಎಲ್ಲಾ ಬೇಲಿ ಸಾಲಲೆಲ್ಲಾ ಹೋಗ್ಬೇಕು.

ನಮ್ಮೂರಲ್ಲೇ ಆದ್ರೆ ಈ ಕಷ್ಟನೇ ಇರಲ್ಲ. ಅಲ್ದೇ ಕೆಲ ಕಡೆ ಅಂಗಡಿಯಲ್ಲಿ ಕದ್ದು ಮಾರ್ತಾರೆ, ಅಲ್ಲಿ ಒನ್ ಟು ಡಬಲ್ ದುಡ್ಡು ಕೊಟ್ಟು ಕದ್ದು ಕುಡಿಯಬೇಕು. ಅಷ್ಟು ದುಡ್ಡು ಕೊಟ್ಟು ಕದ್ದು ಕುಡಿಯೋ ಹಣೆಬರಹ ಯಾಕೆ ? ಅನ್ನೋದು ಮದ್ಯಪ್ರಿಯರ ಪ್ರಶ್ನೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ