CrimeNEWSನಮ್ಮಜಿಲ್ಲೆ

ಬೇರೆಯವನೊಂದಿಗೆ ವಿವಾಹ: ನೊಂದ ಯುವತಿ ಪ್ರಿಯಕರನ ಜೊತೆ ನೇಣಿಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ಗದಗ: ಪ್ರೀತಿಸಿದ ಯುವತಿಯೊಂದಿಗೆ ವಿವಾಹವಾಗದಿದ್ದರಿಂದ ಮನನೊಂದ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.

ಅಪ್ಪಣ್ಣ ಕನಕಪ್ಪ ಗೊರಕಿ (28), ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು. ನರೇಗಲ್ಲ ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇನ್ನು ಇದೇ ಏ.4 ರಂದು ಬೇರೊಬ್ಬ ಯುವಕನೊಂದಿಗೆ ಲಲಿತಾಗೆ ಮದುವೆ ಮಾಡಲಾಗಿತ್ತು. ಆದರೆ ನನ್ನ ಪ್ರಿಯತಮನೊಂದಿಗೆ ಮದುವೆ ಮಾಡಿಕೊಡಲಿಲ್ಲ ಎಂದು ಮಾನಸಿಕವಾಗಿ ನೊಂದಿದ್ದ ಯುವತಿ ಪ್ರೇಮಿಯೊಂದಿಗೆ ಸೇರಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಾನು ಪ್ರೀತಿಸಿದಾತ ಸಿಗದಿದ್ದ ಮೇಲೆ ಈ ಜೀವನವೇ ಬೇಡ ಎಂದು ಯುವತಿ ಅಂದುಕೊಂಡರೆ ನೀನು ಸಿಗದಿದ್ದ ಮೇಲೆ ನನಗೂ ಈ ಜೀವನ ಸಾಕು ಎಂದು ಸಾವಿಗೆ ಶರಣಾಗಿದ್ದಾರೆ.

ಮರವೊಂದರ ಕೊಂಬೆಗೆ ಇಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿದ್ದು ಸ್ಥಳಕ್ಕೆ ನರೇಗಲ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಕುಡಿದು ಕಾರು ಓಡಿಸಿ ಇಬ್ಬರು ಬಿಜೆಪಿ ಕಾರ್ಯಕರ್ತರ ಜೀವ ತೆಗೆದ ಟ್ರೈನಿ ಪೈಲಟ್: ಬಿಜೆಪಿ ಕಾರ್ಯಕರ್ತರಿಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಗುನಾದಲ್ಲಿ ವೇಗವಾಗಿ ಬಂದ ಕಾರು ಕಾರ್ಯಕರ್ತರಿಬ್ಬರು ಚಲಿಸುತ್ತಿದ್ದ​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ರಘುವಂಶಿ ಹಾಗೂ ಕಮಲೇಶ್ ಯಾದವ್ ಮೃತರು. ಇತ್ತ ಅಪಘಾತ ನಡೆಸಿದ ಕಾರ್​ ಚಾಲಕನನ್ನು ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ಆತ ಟ್ರೈನಿ ಪೈಲಟ್ ಆಗಿದ್ದು, ಸಹ ಪೈಲಟ್ ಜತೆಗೆ ಕುಡಿದ ಮತ್ತಿನಲ್ಲಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ