NEWSನಮ್ಮಜಿಲ್ಲೆರಾಜಕೀಯ

ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್‌ಆಗಿ ಶೋಭಾ ಸೋಮನಾಚೆ, ಉಪಮೇಯರ್‌ಆಗಿ ರೇಷ್ಮಾ ಪಾಟೀಲ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದು‌ ಕೊನೆಯಲ್ಲಿ ಮೇಯರ್‌ ಆಗಿ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ಆಗಿ ರೇಷ್ಮಾ ಪಾಟೀಲ ಆಯ್ಕೆಯಾಗಿದ್ದಾರೆ.

ಈ ಮೂಲಕ ಚುನಾವಣೆಯಲ್ಲಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ ರೂಪಿಸಿದ್ದ ತಂತ್ರ ಫಲನೀಡಿದ್ದು, ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆಯಾಗಿದರು.

58 ವಾರ್ಡ್‌ಗಳ ಪೈಕಿ 35 ವಾರ್ಡ್‌ಗಳಲ್ಲಿ ಗೆದ್ದಿರುವ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿತ್ತು. ಆದರೂ ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸಮ್ಮುಖದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಮೇಯರ್ ಸ್ಥಾನ ಯಾರಿಗೆ? ಉಪಮೇಯರ್ ಸ್ಥಾನ ಯಾರಿಗೆ ಎಂಬ ಬಗ್ಗೆ ಚರ್ಚೆಯಾಗಿತ್ತು.

ಮುಖ್ಯವಾಗಿ ಮೇಯರ್ ಸ್ಥಾನ ಮಹಿಳೆ, ಉಪಮೇಯರ್ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದರಿಂದ ಈ ಮೀಸಲು ಗೊಂದಲದಿಂದ ಮೇಯರ್ ಆಯ್ಕೆಯೇ ನಡೆದಿರಲಿಲ್ಲ. ಸದ್ಯ ಮೇಯರ್ ಸ್ಥಾನಕ್ಕೆ 7 ಮಂದಿ ಅರ್ಹರ ಪೈಕಿ 5 ಕಾರ್ಪೊರೇಟರ್‌ಗಳ ಪೈಪೋಟಿ ನಡೆಸಿದ್ದರು. ಈ ನಡುವೆಯೂ ಮರಾಠಾ ಸಮುದಾಯದ ಶೋಭಾ ಸೋಮನಾಚೆ ಮೇಯರ್, ರೇಷ್ಮಾ ಪಾಟೀಲ್ ಉಪಮೇಯರ್ ಆಗಿ ಆಯ್ಕೆಯಾಗಿ ಪಾಲಿಕೆ ಗದ್ದಿಗೆ ಏರಿದ್ದಾರೆ.

ಈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಮತ್ತೊಂದೆಡೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ ಮರಾಠಾ ಸಮುದಾಯ ಮಧ್ಯೆ ಪೈಪೋಟಿ ನಡೆದಿತ್ತು. ಸದ್ಯ ಸಭಾನಾಯಕ ಸ್ಥಾನ ಕನ್ನಡ ಭಾಷಿಕ ಸದಸ್ಯ, ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಮರಾಠಾ ಸಮುದಾಯ ಹಾಗೂ ಮರಾಠಿ ಭಾಷಿಕ ಸದಸ್ಯೆಗೆ ಮೇಯರ್, ಉಪಮೇಯರ್ ಸ್ಥಾನ ನೀಡಬೇಕು ಎಂದು ಬಿಜೆಪಿ ಇವರನ್ನು ಆಯ್ಕೆ ಮಾಡಿದೆ.

ಮೇಯರ್, ಉಪಮೇಯರ್ ಆಯ್ಕೆಗೂ ಮುನ್ನವೇ ಸಭಾನಾಯಕನ ಆಯ್ಕೆ ಮಾಡಲಾಗಿದ್ದು ಮಹಾನಗರ ಪಾಲಿಕೆಯ 36ನೇ ವಾರ್ಡ್ ಸದಸ್ಯ ರಾಜಶೇಖರ ಡೋಣಿ ಸಭಾನಾಯಕರನ್ನಾಗಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಸಭಾನಾಯಕನ ಆಯ್ಕೆ ಮಾಡಲಾಗಿದೆ.

ಮುಂಚೆ ಭಾಷಾ ಆಧಾರಿತ ಚುನಾವಣೆ ನಡೆದು ಎಂಇಎಸ್ ಗೆಲುವು ಸಾಧಿಸುತ್ತ ಬಂದಿತ್ತು. ಇದೇ ಮೊದಲ ಬಾರಿ ಪಕ್ಷದ ಚಿಹ್ನೆ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. 2021ರ ಸೆ.3ರಂದು ಚುನಾವಣೆ ನಡೆದು ಸೆ.6ಕ್ಕೆ ಫಲಿತಾಂಶ ಬಂದಿದ್ದು ಇಂದು ಮೇಯರ್‌ ಮತ್ತು ಉಪಮೇಯರ್‌ ಆಯ್ಕೆಯಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು