CrimeNEWSನಮ್ಮಜಿಲ್ಲೆ

ಬೆಸ್ಕಾಂಗೆ 68 ಸಾವಿರ ರೂ. ದಂಡ ಕಟ್ಟಿದ ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೀಪಾವಳಿ ದಿನದಂದು ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ಕಂಬದಿಂದ ನೇರವಾಗಿ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಈ ಬಗ್ಗೆ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 71 ಯೂನಿಟ್‌ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ ದಂಡ ಹಾಕಬೇಕಿತ್ತು. ಆದರೆ ನನ್ನ ಮನೆಗೆ ತೆಗೆದುಕೊಂಡಿರುವ 33 ಕೆವಿ ವಿದ್ಯುತ್‌ ಬಳಕೆ ಸೇರಿ 68,526 ರೂ. ದಂಡ ವಿಧಿಸಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ ಜನರ ಕಥೆ ಏನು ಎಂದು ಪ್ರಶ್ನಿಸಿದ್ದಾರೆ.

ಇನ್ನು ಬೆಸ್ಕಾಂ ನನಗೆ ವಿಧಿಸಿದ ದಂಡವನ್ನು ನಾನು ಪಾವತಿ ಮಾಡಿದ್ದೇನೆ. ವಿದ್ಯುತ್‌ ಬಿಲ್‌ನಲ್ಲಿ ಲೋಪ ಇರುವ ಹಿನ್ನೆಲೆಯಲ್ಲಿ ನಿಮ್ಮ ನಿಯಮ ಏನಿದೆ? ನಿಯಮದ ಲೆಕ್ಕಾಚಾರದಲ್ಲಿ ಪರಿಶೀಲನೆ ಮಾಡಿ ಎಂದು ಪತ್ರ ಬರೆದಿದ್ದೇನೆ ಎಂದು ವಿವರಿಸಿದರು.

ನನ್ನನ್ನ ಕಳ್ಳ ಎಂದು ಕರೆಯುತ್ತೀರಿ. ಆದರೆ, ಲುಲು ಮಾಲ್ 6 ತಿಂಗಳು ಬಿಲ್ ಪಾವತಿಸಿಲ್ಲ. ಲುಲು ಮಾಲ್ ಪ್ರಾರಂಭಕ್ಕೂ ಮುನ್ನ 6 ತಿಂಗಳು ಬಳಕೆ ಮಾಡಿದಕ್ಕೆ ಬಿಲ್ ಹಾಕ್ತಾರಾ ಎಂದು ಪ್ರಶ್ನಿಸಿರುವ ಎಚ್‌ಡಿಕೆ ಅವರು, ನನ್ನನ್ನು ಕಳ್ಳ ಎಂದು ಹೇಳುವ ಮುನ್ನ ನಿಮ್ಮಲ್ಲಿರುವ ಕಳ್ಳ ನಡೆಯನ್ನು ಮೊದಲು ಸರಿಪಡಿಸಿಕೊಳ್ಳಿ. ನೀವು ಹಗಲು ದರೋಡೆಕೋರರು. ನಾನು ದಂಡ ಕಟ್ಟಿದ್ದೇನೆ. ನೀವು ಲುಲು ಮಾಲ್ ಕರೆಂಟ್ ಕಳ್ಳತನದ ಬಗ್ಗೆ ತನಿಖೆಮಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸವಾಲು ಹಾಕಿದರು.

ಮೇಕೆದಾಟು ಪಾದಯಾತ್ರೆಗೆ ಯಾವ ಕರೆಂಟ್ ತಗೊಂಡಿದ್ದೀರಿ. ಕನಕಪುರದಲ್ಲಿ ಕನಕೋತ್ಸವ ನಡೆಯುತ್ತದೆ. ಅದಕ್ಕೆ ಕರೆಂಟ್ ಎಲ್ಲಿಂದ ಬಂತು? ಯಾರು ದೊಡ್ಡ ಕಳ್ಳ? ಹೇಗೆ ಮಾಡಿದರೂ ಉತ್ತರ ಕೊಡಬೇಕು. ಎಲ್ಲವೂ ಕಣ್ಣ ಮುಂದೆ ಇದೆ. ಬೇಕಿದ್ರೆ ವಿಡಿಯೋ ಕೊಡೋಣ. ನನ್ನನ್ನು ಬೆದರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಮನೆಗೆ ವಿದ್ಯುತ್‌ ದೀಪಾಲಂಕಾರದ ವೇಳೆ ಕೆಲಸಗಾರರೊಬ್ಬರು ಮಾಡಿದ ಪ್ರಮಾದಕ್ಕೆ ನಾನು ದಂಡ ಕಟ್ಟಿದ್ದೇನೆ. ಕಾರಣ ಇದು ನಮ್ಮ ಮನೆಗೆ ಪಡೆದಿದ್ದ ವಿದ್ಯುತ್‌ ಆಗಿದ್ದರಿಂದ ಇದರ ಜವಾಬ್ದಾರಿ ನಾನೇ ಹೊತ್ತು ಈ ಕೆಲಸ ಮಾಡಿದ್ದೇನೆ. ಇದೇ ರೀತಿ ತಾವೇ ಮಾಡಿದ ತಪ್ಪನ್ನು ಒಪ್ಪಿ ದಂಡ ಕಟ್ಟಿ ತೋರಿಸಿ ಎಂದು ಜಾಡಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!