NEWSದೇಶ-ವಿದೇಶವಿಶೇಷ

ಮೇಕ್​ ಇನ್​ ಇಂಡಿಯಾದಂತೆ ಮೇಡ್​ ಇನ್​ ರಷ್ಯಾಗೆ ಪ್ರಾಮುಖ್ಯತೆ ಕೊಡಿ: ಅಧಿಕಾರಿಗಳಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಮಾಸ್ಕೊ: ಮೇಕ್​ ಇನ್​ ಇಂಡಿಯಾ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್‌   ಕೊಂಡಾಡಿದ್ದಾರೆ. ಅಲ್ಲದೆ, ಭಾರತವನ್ನು ನೋಡಿ ಕಲಿಯಿರಿ ಎಂದು ತಮ್ಮ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ರಷ್ಯಾದ ವ್ಲಾಡಿವೋಸ್ಟಾಕ್​ನಲ್ಲಿ ನಡೆದ 8ನೇ ಪೂರ್ವ ಆರ್ಥಿಕ ವೇದಿಕೆಯಲ್ಲಿ ರಷ್ಯಾ ನಿರ್ಮಿತ ಕಾರುಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುವಾಗ ವ್ಲಾಡಿಮಿರ್​ ಪುಟಿನ್​ ಅವರು ಭಾರತದ ಮೇಕ್​ ಇನ್​ ಇಂಡಿಯಾ ಯೋಜನೆಯನ್ನು ಉದಾಹರಣೆ ನೀಡಿ ಪ್ರಧಾನಿ ಮೋದಿ ಅವರನ್ನು ಹೊಗಳಿದರು.

ದೇಶೀಯವಾಗಿ ತಯಾರಿಸಿದ ವಾಹನಗಳನ್ನು ಖಂಡಿತವಾಗಿ ಬಳಸಬೇಕು. ಈ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಈಗಾಗಲೇ ಇದನ್ನು ಸಾಬೀತುಪಡಿಸುವ ನಿಟ್ಟಿನಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ನಾವು ನಮ್ಮ ಅನೇಕ ಪಾಲುದಾರರಿಂದ, ಅದರಲ್ಲೂ ವಿಶೇಷವಾಗಿ ಭಾರತದಿಂದ ತುಂಬಾ ಕಲಿಯಬೇಕಿದೆ ಎಂದರು.

ಇನ್ನು ಭಾರತೀಯರು ಹೆಚ್ಚಾಗಿ ಭಾರತದಲ್ಲೇ ಉತ್ಪಾದಿಸುವ ಕಾರುಗಳ ಬಳಕೆಯ ಮೇಲೆ ಕೇಂದ್ರೀಕರಿಸುತ್ತಿದ್ದಾರೆ. ಇದರಲ್ಲಿ ಪ್ರಧಾನಿ ಮೋದಿ ಅವರ ಪಾತ್ರ ಪ್ರಮುಖವಾಗಿದೆ. ಭಾರತದ ಉತ್ಪನ್ನಗಳನ್ನು ಬಳಸಲು ಜನರನ್ನು ಉತ್ತೇಜಿಸುವ ಮೂಲಕ ಸರಿಯಾದ ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿಯೂ ಅಂತಹ ವಾಹನಗಳೂ ಲಭ್ಯವಿವೆ ಮತ್ತು ನಾವು ಅದನ್ನು ಬಳಸಿಕೊಳ್ಳಬೇಕು ಎಂದು ಪುಟಿನ್​ ಹೇಳಿದರು.

ನಿಮಗೆ ಗೊತ್ತಾ ಒಂದು ಕಾಲದಲ್ಲಿ ನಮ್ಮಲ್ಲಿ ಸ್ವದೇಶಿ ನಿರ್ಮಿತ ಕಾರುಗಳಿರಲಿಲ್ಲ. ಆದರೆ, ಈಗ ನಾವು ಆ ಶಕ್ತಿಯನ್ನು ಹೊಂದಿದ್ದೇವೆ. ನಾವು 1990ರ ದಶಕದಲ್ಲಿ ಅಪಾರ ಪ್ರಮಾಣದಲ್ಲಿ ಖರೀದಿಸಿದ ಮರ್ಸಿಡಿಸ್ ಅಥವಾ ಆಡಿ ಕಾರುಗಳಿಗಿಂತ ಸ್ವದೇಶಿ ಕಾರುಗಳು ಹೆಚ್ಚು ಸಾಧಾರಣವಾಗಿ ಕಾಣುತ್ತವೆ ಎಂಬುದು ನಿಜ, ಆದರೆ ಇದು ಸಮಸ್ಯೆಯಲ್ಲ. ಈ ವಿಚಾರದಲ್ಲಿ ನಾವು ನಮ್ಮ ಅನೇಕ ಪಾಲುದಾರರನ್ನು ಅನುಕರಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದರು.

ಇನ್ನು ಉದಾಹರಣೆ ಸಹಿತ ವಿವರಿಸಬೇಕು ಎಂದರೆ ಭಾರತ ಅಲ್ಲಿ ದೇಶಿ ನಿರ್ಮಿತ ವಾಹನಗಳ ತಯಾರಿಕೆ ಮತ್ತು ಬಳಕೆಯ ಮೇಲೆ ಕೇಂದ್ರೀಕರಿಸಿದೆ. ಅದರಂತೆ ನಾವು ಕೂಡ ಸ್ವದೇಶಿ ನಿರ್ಮಿತ ವಾಹನಗಳ ತಯಾರಿಕೆ ಮತ್ತು ಬಳಕೆಯ ಮೇಲೆ ಕೇಂದ್ರೀಕರಿಸಬೇಕು ಎಂದರು.

ನಾವು ನಮ್ಮದೇಯಾದ ಆಟೋಮೊಬೈಲ್ಸ್​ ಹೊಂದಿದ್ದೇವೆ. ಹೀಗಾಗಿ ಸ್ವದೇಶಿ ಆಟೋ ಮೊಬೈಲ್ಸ್​ ಬಳಸುವುದು ಸಂಪೂರ್ಣ ಉತ್ತಮವಾಗಿದೆ. ಇದು ನಮ್ಮ ವಿಶ್ವ ವ್ಯಾಪಾರ ನೀತಿಯ ಬಾಧ್ಯತೆಗಳ ಯಾವುದೇ ಉಲ್ಲಂಘನೆಗಳಿಗೆ ಕಾರಣವಾಗುವುದಿಲ್ಲ ಮತ್ತು ಇದು ಸ್ವದೇಶಿ ವಸ್ತುಗಳ ಖರೀದಿಗೆ ಸಂಬಂಧಿಸಿದೆ ಎಂದು ತಿಳಿಸಿದರು.

ಇನ್ನು ನಮ್ಮ ದೇಶದ ವಿವಿಧ ವರ್ಗದ ಅಧಿಕಾರಿಗಳು ಯಾವ ಕಾರುಗಳನ್ನು ಓಡಿಸಬಹುದು ಎಂಬುದರ ಕುರಿತು ನಾವು ನಿರ್ದಿಷ್ಟ ಸರಪಳಿಯನ್ನು ರಚಿಸಬೇಕು, ಇದರಿಂದ ಅವರು ದೇಶೀಯವಾಗಿ ತಯಾರಿಸಿದ ಕಾರುಗಳನ್ನು ಬಳಸುತ್ತಾರೆ ಎಂದು ಹೇಳುವ ಮೂಲಕ ಮೇಡ್​ ಇನ್​ ರಷ್ಯಾ ಪ್ರಾಮುಖ್ಯತೆಯನ್ನು ಪುಟಿನ್​ ಒತ್ತಿ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು