CrimeNEWSನಮ್ಮಜಿಲ್ಲೆ

ಮಿಕ್ಸಿ ಸ್ಫೋಟ ಪ್ರಕರಣ – ಪ್ರೀತಿ ನಿರಾಕರಿಸಿ ಅವಮಾನಿಸಿದ್ದಕ್ಕೆ ಆಕೆ ಮುಗಿಸಲು ಸ್ಕೆಚ್‌ ಹಾಕಿದ್ದೆ 

ವಿಜಯಪಥ ಸಮಗ್ರ ಸುದ್ದಿ

ಹಾಸನ: ನನ್ನ ಪ್ರೀತಿ ನಿರಾಕರಿಸಿ ಅವಮಾನಿಸಿದ್ದಕ್ಕೆ ಆಕೆಯನ್ನು ಮುಗಿಸಲು ಸ್ಕೆಚ್‌ ಹಾಕಿದ್ದೆ ಎಂದು ಕೊರಿಯರ್ ಶಾಪ್‌ನಲ್ಲಿ ಸಂಭವಿಸಿದ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧ ಪೊಲೀಸ್‌ ವಶದಲ್ಲಿರುವ ಪ್ರಮುಖ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಪ್ರಕರಣದ ಪ್ರಮುಖ ಆರೋಪಿ ಅನೂಪ್ ಕುಮಾರ್ ಎಂಬಾತನನ್ನು ನೆಲಮಂಗಲ ಬಳಿ ಬಂಧಿಸಿದ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದರು.

ಮಿಕ್ಸಿಯಲ್ಲಿ ಡಿಟೋನೇಟರ್ ಹಾಕಿ ಡಿಟೋನೇಟರ್ ಬ್ಲಾಸ್ಟ್ ಮಾಡುವುದು ಹೇಗೆ ಎಂದು ಇಂಟರ್‌ನೆಟ್ ಆರೋಪಿ ಹುಡುಕಿದ್ದ ಆರೋಪಿ ಅನೂಪ್ ಕುಮಾರ್ ರಾಮನಗರದ ಬಳಿಯ ಕ್ವಾರಿಯಲ್ಲಿ ಎರಡು ಡಿಟೋನೇಟರ್‌ಗಳನ್ನು ಕದ್ದು ತಂದಿದ್ದಾನೆ. ಈ ಡಿಟೋನೇಟರ್ ಕಳವು ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ತಿಳಿಸಿದರು.

ಡಿಸೆಂಬರ್ 16 ರಂದು ಪಾರ್ಸೆಲ್ ಕಳುಹಿಸಲಾಗಿದೆ, ಡಿಸೆಂಬರ್ 26 ರಂದು ಮಿಕ್ಸಿ ಬ್ಲಾಸ್ಟ್ ಆಗಿದೆ. ಆದರೆ ಇದಕ್ಕೂ ಮೊದಲು ಅಂದರೆ ಡಿ.17 ರಿಂದಲೇ ಹಾಸನದಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿರುವ ಬಗ್ಗೆ ಸುದ್ದಿ ಬಂದಿದೆಯೇ ಎಂದು ಹಲವು ವೆಸ್‌ಸೈಟ್‌ಗಳಲ್ಲಿ ಆರೋಪಿ ಸರ್ಚ್‌ ಮಾಡುತ್ತಿದ್ದುದಾಗಿ ಬಾಯಿ ಬಿಟ್ಟಿದ್ದಾನೆ. ಇನ್ನು ಆತನ ಮನೆಯಲ್ಲಿದ್ದ ಡಿಟೋನೇಟರ್ ಬ್ಲಾಸ್ಟಿಂಗ್ ವೈರ್ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. [wp-rss-aggregator limit=”1″]

ತಲಘಟ್ಟಪುರದ ಆರೋಪಿ ಮನೆಯಲ್ಲಿ ಮಿಕ್ಸಿಯ ಮೂರನೇ ಜಾರ್ ಪತ್ತೆಯಾಗಿದೆ. ಇನ್ನು ನನ್ನ ಪ್ರೀತಿ ನಿರಾಕರಿಸಿ ಅವಮಾನ ಮಾಡಿದ್ದಕ್ಕೆ ವಸಂತಾಳನ್ನು ಕೊಲೆ ಮಾಡಲು ನಿರ್ಧರಿಸಿದ್ದಾಗಿ ತನಿಖೆ ವೇಳೆ ಆರೋಪಿ ತಪ್ಪೊಪ್ಪಿಕೊಳ್ಳುವ ಮೂಲಕ ಮಿಕ್ಸಿ ಬ್ಲಾಸ್ಟ್ ಗೆ ಬಹುತೇಕ ಸ್ಪಷ್ಟತೆ ಸಿಕ್ಕಂತಾಗಿದೆ. ಆದರೆ ಈ ಬಗ್ಗೆ ಇನ್ನು ಹಲವು ರಿತಿಯಲ್ಲಿ ವಿಚಾರಣೆ ನಡೆಸಬೇಕಿರುವುದರಿಂದ 7 ದಿನಗಳ ಕಾಲ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು