CrimeNEWSನಮ್ಮರಾಜ್ಯ

ಮಂಗಳೂರು: ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ – ಡಿಜಿಪಿ ಪ್ರವೀಣ್ ಸೂದ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಇಲ್ಲಿನ ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಸಾವು- ನೋವು ಹಾನಿ ಉಂಟು ಮಾಡಲು ಈ ಸಂಚು ಮಾಡಲಾಗಿತ್ತು. ಹೀಗಾಗಿ ಕರ್ನಾಟಕ ಪೊಲೀಸರಿಂದ ಸೂಕ್ಷ್ಮ ಮತ್ತು ಆಳವಾಗಿ ತನಿಖೆ ನಡೆಸಲಾಗುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗ್ತಿದೆ ಎಂದು ಡಿಜಿಪಿ ಟ್ವೀಟ್‌ ಮೂಲಕ ಹೇಳಿದ್ದಾರೆ. ಪ್ರವೀಣ್ ಸೂದ್​ ಅವರ ಟ್ವೀಟ್​​ನ್ನು ಎಡಿಜಿಪಿ ಅಲೋಕ್ ಕುಮಾರ್ ರೀಟ್ವೀಟ್ ಮಾಡಿದ್ದಾರೆ.

ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣ ಭೇದಿಸಲು ಪೊಲೀಸ್ ಕಮಿಷನರ್ ಮೂರು ತಂಡಗಳ ರಚನೆ ಮಾಡಿದ್ದಾರೆ. ಕಳೆದ ರಾತ್ರಿಯೇ ರಾಜ್ಯದ ವಿವಿಧ ಭಾಗಗಳಿಗೆ ಪೊಲೀಸರ ತಂಡ ತೆರಳಿದೆ. ಸ್ಫೋಟದ ಜಾಡು ಹಿಡಿದು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಯಾಣಿಕನಿಂದ ಅಸ್ಪಷ್ಟ ಮಾಹಿತಿ: ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕ ಪ್ರೇಮ್ ರಾಜ್​ ಪೊಲೀಸರ ಎದುರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾನೆ ಎನ್ನಲಾಗಿದೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದು, ತನ್ನ ಸೋದರ ಬಾಬುರಾವ್​ಗೆ ಕರೆ ಮಾಡಿ ಅಂತ ನಂಬರ್ ನೀಡಿದ್ದಾನೆ. ಆದರೆ ಕರೆ ಮಾಡಿದ್ರೆ ಆ ವ್ಯಕ್ತಿ ಸಂಬಂಧಿಕನೇ ಅಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ತನಿಖೆಗೆ ಎನ್‌ಐಎ?: ಆಟೋ ಸ್ಫೋಟ ಹಿನ್ನೆಲೆ ಇಂದು ಬೆಂಗಳೂರಿನಿಂದ ಮಂಗಳೂರಿಗೆ ಎನ್​​​ಐಎ ತಂಡ ಆಗಮಿಸುವ ಸಾಧ್ಯತೆಗಳಿವೆ. ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಫೋಟವಾಗಿರುವ ಹಿನ್ನೆಲೆ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆ ಇಂದು ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡ ಆಗಮಿಸಲಿದೆ ಎನ್ನಲಾಗಿದೆ. ಉಗ್ರ ಕೃತ್ಯದ ಆಯಾಮದಲ್ಲಿ ಎನ್​​ಐಎ ತನಿಖೆ ನಡೆಸುವ ಸಾಧ್ಯತೆಗಳಿವೆ. ಮತ್ತೊಂದು ಕಡೆ ಶ್ವಾನದಳದಿಂದ ಸ್ಥಳದ ಪರಿಶೀಲನೆ ನಡೆಸಲಾಗುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಗಾಯಗೊಂಡವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಮಾತನಾಡುವ ಸ್ಥಿತಿಯಲ್ಲಿಲ್ಲ. ನಮ್ಮ ಮಂಗಳೂರು ಪೊಲೀಸರು ಇದರ ಹಿನ್ನೆಲೆಯನ್ನು ಬೇಧಿಸುತ್ತಿದ್ದಾರೆ. ಮಾಹಿತಿ ಪ್ರಕಾರ ಇದರ ಹಿನ್ನೆಲೆ ಬಹಳ ದೊಡ್ಡದಿದೆ. ಭಯೋತ್ಪಾದನಾ ಸಂಘಟನೆಗಳ ಲಿಂಕ್ ಇದರ ಹಿಂದೆ ಇತ್ತಾ ಅನ್ನೋ ಸೂಚನೆ ಕಂಡು ಬರುತ್ತಿದೆ ಎಂದು ಹೇಳಿದರು.

ಈ ಸಂಬಂಧ ಕೇಂದ್ರ ಭದ್ರತಾ ಪಡೆ ಜೊತೆಗೆ ಮಾತುಕತೆ ನಡೆದಿದೆ. ಅವರು ಸಹ ಬಂದಿದ್ದು, ಜಂಟಿಯಾಗಿ ಕಾರ್ಯಾಚರಣೆ, ತನಿಖೆ ನಡೆಸಲಾಗುತ್ತಿದೆ. ಒಂದೆರೆಡು ದಿನಗಳಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ