NEWSನಮ್ಮಜಿಲ್ಲೆನಮ್ಮರಾಜ್ಯ

ಮತ್ತೇ ಸಚಿವರ ಭರವಸೆಗೆ ಕಿವಿಯಾಗಿ 8ದಿನದ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸಾರಿಗೆ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸುವರ್ಣ ಸೌಧದ ಮುಂಭಾಗ ಕಳೆದ 8 ದಿನಗಳಿಂದ ಸಾರಿಗೆ ಸಮಾನ ಮನಸ್ಕರ ವೇದಿಕೆಯಿಂದ ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಸಾರಿಗೆ ಸಚಿವರು ಕೊಟ್ಟ ಭರವಸೆಯ ಹಿನ್ನೆಲೆಯಲ್ಲಿ ಇಂದು ಅಂತ್ಯಕಂಡಿದೆ.

ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಚಂದ್ರಶೇಖರ್‌ ಅವರನ್ನು ಇಂದು ಸಂಜೆ ಸುವರ್ಣಸೌಧಕ್ಕೆ ಕರೆಸಿಕೊಂಡ ಸಾರಿಗೆ ಸಚಿವ ಶ್ರೀರಾಮುಲು ಅವರು, ಯಾವುದೇ ಷರತ್ತುಗಳಿಲ್ಲದೆ ವಜಾಗೊಳಿಸಿರುವ ನೌಕರರನ್ನು ತೆಗೆದುಕೊಳ್ಳುವ ಮತ್ತು ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವ ಸಂಬಂಧ ಭರವಸೆ ನೀಡಿದ್ದರಿಂದ ಇಂದು ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿರುವುದಾಗಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಇಂದು ರಾತ್ರಿ 8.40ರ ಸುಮಾರಿಬಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಚಂದ್ರಶೇಖರ್‌, ಸಚಿವರು ವಜಗೊಂಡಿರುವ ನೌಕರರನ್ನು ವಾಪಸ್‌ ತೆಗೆದುಕೊಳ್ಳುವ ಜತೆಗೆ ವೇತನ ಆಯೋಗದ ಬಗ್ಗೆ ಸಚಿವರಿಗೆ ಇದ್ದ ಗೊಂದಲಗಳ ಬಗ್ಗೆ ವಿವರಣೆ ನೀಡಿದ್ದರಿಂದ ಅವರು ಈ ಬಗ್ಗೆ ಹಣಕಾಸು ಜವಾಬ್ದಾರಿಯನ್ನು ಹೊಂದಿರುವ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಗುತ್ತಿದ ಎಂದು ತಿಳಿದಿದರು.

ಸಾರಿಗೆ ಸಚಿವರು ಬರಿ ಭರವಸೆಕೊಡುತ್ತಲೇ ಈಗ ಮೂರು ವರ್ಷಕಳೆದಿದ್ದಾರೆ. ಅವರ ಭರವಸೆಯನ್ನೇ ನಂಬಿಕೊಂಡು ನೌಕರರು ಕೂಡ ಇನ್ನೂ ಕಾಲ ಕಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೌಕರರು ಇಟ್ಟಿರುವ ಬೇಡಿಕೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಈಡೇರಿಸುತ್ತದೆ ಎಂಬ ಭರವಸೆಯನ್ನು ಕೆಲ ನೌಕರರು ಕಳೆದುಕೊಂಡಿದ್ದು, ಕಾನೂನಾತ್ಮಕವಾಗಿ ಹೋರಾಟ ಒಂದೇ ದಾರಿ ಎಂದು ಹೇಳುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ