NEWSನಮ್ಮಜಿಲ್ಲೆ

ಮದ್ಯ ಮಾರಾಟ ಬೇಡವೇ ಬೇಡ ಎಂದ ರಮೇಶ್ ಜಾರಕಿಹೊಳಿ

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟಕ್ಕೆ ಕಡಿವಾಣ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಕೊವೀಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟ ಆರಂಭಿಸಬಾರದು ಎಂದರು.

ಯಾವುದೇ ಒತ್ತಡಕ್ಕೂ ಮಣಿಯದೇ ಸೂಕ್ತ ವ್ಯವಸ್ಥೆ ಇರುವ ಹೋಟೆಲ್ ಗಳನ್ನು ಮಾತ್ರ ಕ್ವಾರಂಟೈನ್ ಗೆ ಪಡೆದುಕೊಳ್ಳಬೇಕು. ಸಹಕಾರಿ ಬ್ಯಾಂಕುಗಳು ತೆರೆದು ಗ್ರಾಹಕರಿಗೆ ಸೇವೆ ಒದಗಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪಿಪಿಇ ಕಿಟ್ ಗಳನ್ನು ಕೂಡ ಹೆಚ್ಚುವರಿಯಾಗಿ ಪಡೆದುಕೊಳ್ಳಲು ಸಚಿವರು ಕ್ರಮವಹಿಸಬೇಕು ಎಂದು ಮನವಿ ಮಾಡಿಕೊಂಡರು. ಚೈನಾದಿಂದ ಒಟ್ಟಾರೆ ರಾಜ್ಯಕ್ಕೆ ಒಂದು ಲಕ್ಷ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗೂ ಆದೇಶ ನೀಡಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಒದಗಿಸಿರುವ ಕಿಟ್ ಗಳನ್ನು ಜಿಲ್ಲೆಗೆ ಪೂರೈಸಲು ಕೋರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ತಿಳಿಸಿದರು.

ಕ್ವಾರಂಟೈನ್ ನಲ್ಲಿ ಇರುವವರಲ್ಲಿ ಸೋಂಕು ದೃಢಪಟ್ಟಿದ್ದು, ಇದು ಸಮುದಾಯದಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಪ್ರಾಥಮಿಕ ಸಂಪರ್ಕ ಕ್ಕೆ ಬಂದವರನ್ನು ಹೋಟೆಲ್ ಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ 43 ಹೋಟೆಲ್ ಗಳನ್ನು ಪಡೆದುಕೊಂಡು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಅವರವರ ಮನೆಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದರು.

ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್,  ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪೊಲಿಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ