NEWSನಮ್ಮಜಿಲ್ಲೆಮೈಸೂರು

ಮೈಸೂರು ದಸರಾ: ಪ್ರವಾಸಿಗರ ಸುಗಮ ಸಂಚಾರಕ್ಕೆ ಪ್ರಾಮುಖ್ಯತೆ- ಶಾಸಕ ಶ್ರೀವತ್ಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೈಸೂರಿನ ಜನರ ಸುಗಮ ಸಂಚಾರಕ್ಕಾಗಿ ಶಾಸಕ ಟಿ.ಎಸ್.ಶ್ರೀವತ್ಸ ಆಯಕಟ್ಟಿನ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್ ಅವರೊಂದಿಗೆ ಹೆಚ್ಚು ಅಪಘಾತವಾಗುವ   ಸ್ಥಳಗಳನ್ನು ಪರಿಶೀಲಿಸಿದರು. ಈ ವೇಳೆ ಮಾತಾಡಿದ ಶಾಸಕ ಶ್ರೀವತ್ಸ, ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ಮತ್ತು ಮೈಸೂರಿನ ಜನರಿಗೆ ತೊಂದರೆ ಆಗದ ರೀತಿ ನೋಡಿಕೊಳ್ಳಬೇಕಿದೆ. ಇಂದು ಒಂದೆರಡು  ಅಪಘಾತ ಸ್ಥಳಗಳನ್ನು ಎಸಿಪಿ ಅವರಿಗೆ ತೋರಿಸಿದ್ದೇನೆ ಎಂದು ಹೇಳಿದರು.

ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ, ಎಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ, ಯಾವ ಕಡೆ ಹಂಪ್ಸ್‌ಗಳನ್ನು ಹಾಕಬೇಕು ಎಂಬ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದರು.

ಮಾನಂದವಾಡಿ ಜಂಕ್ಷನ್, ಸೆಂಚುರಿ ಪಾರ್ಕ್, ನಜರ್‌ಬಾದ್ ಠಾಣೆ ಬಳಿ, ಹಳೆ ರಿಜೆನ್ಸಿ ಥಿಯೇಟರ್ ಬಳಿ, ಜಿಂಜರ್ ಹೋಟೆಲ್ ತಿರುವಿನ ಜಾಗದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಜನ ಇನ್ನು ಸಮಸ್ಯೆ ಹೇಳಿದ್ದಾರೆ. ಮೈಸೂರು ಸೌತ್ ಬಳಿ ಸಮಸ್ಯೆ ಇದೆ ಎಂದು ತಿಳಿಸಿದರು.

ಇನ್ನು ಜಾಕಿ ಫ್ಯಾಕ್ಟರಿ ನಾಡನಹಳ್ಳಿ ಪಾಳ್ಯ, ಎಚ್.ಡಿ.ಕೋಟೆ ಕಡೆ ಹೋಗುವ ರಸ್ತೆಗಳಲ್ಲೂ ಹಂಪ್ಸ್ ಹಾಕಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀವತ್ಸ ತಿಳಿಸಿದರು.

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್, ನಗರಪಾಲಿಕೆ ಸದಸ್ಯೆ ಛಾಯಾದೇವಿ, ಸಿಂಡಿಕೇಟ್ ಸದಸ್ಯ ಗೋಕುಲ್ ಗೋವರ್ಧನ್, ಬಿಜೆಪಿ ಮುಖಂಡರಾದ ಪ್ರದೀಪ್ ಕುಮಾರ್, ಜೈರಾಮ್, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ಜಗದೀಶ್, ಕೆ.ಎಂ.ನಿಶಾಂತ್, ಮನೋಜ, ಪ್ರಸನ್ನ, ಕಿಶೋರ ಕಂಡೇಶ್, ಚೇತನ್ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು