NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು: ಬೆಳಗಾವಿಯ ಅಧಿವೇಶನದಲ್ಲಿ ಸಾರಿಗೆ ನೌಕರರ ಪರ ಧ್ವನಿಎತ್ತಿ: ಜೆಡಿಎಸ್‌ ಶಾಸಕ ಜಿಟಿಡಿಗೆ ಕೂಟದ ಪದಾಧಿಕಾರಿಗಳ ಮನವಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇದೇ ಡಿಸೆಂಬರ್‌ 19ರಿಂದ ಬೆಳಗಾವಿಯಲ್ಲಿ ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಾರಿಗೆ ನೌಕರರ ಸಮಸ್ಯೆ ಮತ್ತು ಸರಿ ಸಮಾನ ವೇತನ ಸಂಬಂಧ ತಾವು ಮಾತನಾಡಬೇಕು ಎಂದು ಜೆಡಿಎಸ್‌ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರಲ್ಲಿ ಸಾರಿಗೆ ನೌಕರರ ಕೂಟದ ಮೈಸೂರು ವಿಭಾಗದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಭಾನುವಾರ ಶಾಸಕರ ಮನೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಕಳೆದ ಮೂರು ವರ್ಷದಿಂದ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಮತ್ತು ಆಡಳಿತ ಮಂಡಳಿಗಳಿಗೆ ನೂರಾರು ಮನವಿ ಪತ್ರಗಳನ್ನು ಸಲ್ಲಿಸಿದ್ದೇವೆ. ಆದರೂ ನಮ್ಮ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಆದ ಕಾರಣ ತಾವು ಚಳಿಗಾಲದ ಅಧಿವೇಶನದಲ್ಲಿ ನಮ್ಮ ಪರವಾಗಿ ಧ್ವನಿಯೆತ್ತಬೇಕು ಎಂದು ಮನವಿ ಮಾಡಿದರು.

ಇನ್ನು ನಾವು ಅವರ ಮನೆಗೆ ಹೋಗುತ್ತಿದ್ದಂತೆ ನಮ್ಮನ್ನು ಅತಿ ಸೌಜನ್ಯದಿಂದ ಬರಮಾಡಿಕೊಂಡು ನಿಮ್ಮ ಸಮಸ್ಯೆಗಳನ್ನು ನಾನು ಅರಿತಿದ್ದೇನೆ ಈಗಾಗಲೇ ಅಂದರೆ ಮೊಟ್ಟಮೊದಲ ಬಾರಿಗೆ ವಿಧಾನಸೌಧದಲ್ಲಿ ನಿಮ್ಮ ಪರವಾಗಿ ಮಾತನಾಡಿದ್ದೇನೆ. ಮತ್ತೊಮ್ಮೆ ನಿಮ್ಮ ಪರವಾಗಿ ಧ್ವನಿಗೂಡಿಸಿ ಸರ್ಕಾರದ ಗಮನ ಸೆಳೆದು ನಿಮ್ಮ ಸಾತ್ವಿಕ ಬೇಡಿಕೆಗಳು ಆದಷ್ಟು ಬೇಗ ಈಡೇರಿಸಲು ಪ್ರಯತ್ನಪಡುತ್ತೇನೆ ಎಂದು ಭರಸೆ ನೀಡಿದ್ದಾರೆ.

ನಿಮ್ಮ ಕಷ್ಟಗಳನ್ನು ನಾನು ಅರಿತವನಾಗಿ ನಿಮ್ಮ ಪರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವ ಮೂಲಕ ಬೇಡಿಕೆ ಈಡೇರಿ ನಿಮ್ಮ ಬದುಕು ಹಸನಾಗಲಿ ಎಂಬುವುದು ನಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.

ಎಲ್ಲರ ಸಮಸ್ಯೆಗಳನ್ನು ಅತೀ ಜರೂರಾಗಿ ಗಮನಿಸುವ ಸರ್ಕಾರ ಸಾರಿಗೆ ನೌಕರರು ಮತ್ತು ಅನ್ನದಾತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಮಾತ್ರ ಹಿಂದೆ ಸರಿಯುತ್ತದೆ. ಇದರ ಅರ್ಥ ಏನು ಎಂದು ಈಗ ಜನಸಾಮಾನ್ಯ ಕೇಳುತ್ತಿದ್ದಾನೆ. ಆದರೆ ಸರ್ಕಾರದ ಅಸಡ್ಡೆ ಮನೋಭಾವನೆಯಿಂದ ಇನ್ನು ಉತ್ತರ ಸಿಕ್ಕಿಲ್ಲ.

ಅದೇನೇ ಇರಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಾದರೂ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತಹ ನಿರ್ಧಾರವನ್ನು ಸರ್ಕಾರ ಮಾಡಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಕಲಿಯಲಿದೆ.

ಶಾಸಕರ ಭೇಟಿವೇಳೆ ಕೂಟದ ಪದಾಧಿಕಾರಿಗಳಾದ ಸಿ.ಡಿ. ವಿಶ್ವನಾಥ್, ಕೆ.ಪಿ. ರಾಘವೇಂದ್ರ, ರವಿ, ಮಂಜೇಗೌಡ, ದೀಪು, ರಾಮೇಗೌಡ, ಇನ್ನು ಹಲವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ