NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂ\ರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದು ಇಲ್ಲ ಅದೆಲ್ಲ ಸುಳ್ಳು ಆರೋಪ. ಅವರಿಗೂ ಹಿಡಿದು ಯಾರೋ ಕಪಾಳಕ್ಕೆ ಹೊಡೆದರು ಎಂದು ನನಗೂ ಯಾರೋ ಹೇಳಿದರು. ಅದಕ್ಕೆ ಆಧಾರ ಇದೆಯಾ ಎಂದು ಪ್ರಶ್ನಿಸಿದರು.

ಯಾರಿಗೋ ಮೋಸ ಮಾಡಿದ್ದಾರಂತೆ, ಅವರಿಗೂ ಕಪಾಳಕ್ಕೆ ಹೊಡೆದರಂತೆ ಎಂದು ನನಗೂ ಹೇಳಿದರು. ಯಾರೋ ಹೇಳಿದರು ಎಂದು ಅದನ್ನು ನಾನು ನಂಬೋಕಾಗುತ್ತಾ, ಹೇಳೋಕಾಗುತ್ತಾ? ಯಾವ ಸಚಿವರು ಹೊಡೆದು ಇಲ್ಲ ಏನೂ ಇಲ್ಲ. ಬರಿ ಹಿಟ್ ಅಂಡ್ ರನ್ ಮಾಡೋಕೆ ಆಗುತ್ತಾ ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕ ಸರ್ಕಾರ 700 ಕೋಟಿ ರೂಪಾಯಿ ಸಂಗ್ರಹ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ರಾಜಕೀಯವಾದ ಆರೋಪ. ಆರೋಪ ಸಾಬೀತು ಪಡಿಸಿದರೆ ಸಣ್ಣ ಶಿಕ್ಷೆಗೂ ಗುರಿಯಾಗುತ್ತೇವೆ ಎಂದು ಹೇಳಿದರು.

ಇನ್ನು ದೊಡ್ಡ ಹುದ್ದೆಯಲ್ಲಿರುವವರು ಆಧಾರ ಇಲ್ಲದೇ ಆರೋಪ ಮಾಡಬಾರದು. ಮಹಾರಾಷ್ಟ್ರದಲ್ಲಿ ಗ್ಯಾರಂಟಿಗಳ ಬಗ್ಗೆ ಸುಳ್ಳು ಹೇಳಿಕೆ ಕೊಟ್ಟಿದ್ದರು. ಅದಕ್ಕಾಗಿ ನಾನು ಪತ್ರ ಬರೆಯುತ್ತಿದ್ದೇನೆ ಎಂದರು.

ಅದೇನೆಂದರೆ ವಿಮಾನ, ಬಸ್‌ಗಳ ವ್ಯವಸ್ಥೆ ಮಾಡುತ್ತೇವೆ. ಗ್ಯಾರಂಟಿಗಳು ಜನತೆಗೆ ತಲುಪುತ್ತಿದೆಯಾ ಇಲ್ವ ಅಂತ ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಲಿ. ನಮ್ಮ ಪಕ್ಷದಿಂದಲೇ ವಿಶೇಷ ವಿಮಾನ ವ್ಯವಸ್ಥೆಯನ್ನು ಮಾಡುತ್ತೇವೆ. ಅಲ್ಲದೆ ಅದರ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದು ಹೇಲಿದರು.

ಇನ್ನು ಸುಳ್ಳೇ ಬಿಜೆಪಿವರ ಅಸ್ತ್ರ. ಕರ್ನಾಟಕದಲ್ಲಿ ಇದರ ರುಚಿ ಗೊತ್ತಾಗಿದೆ. ಜನ ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ