ಸಂಸ್ಕೃತಿ

ಮಹದೇಶ್ವರ ಬೆಟ್ಟದಲ್ಲಿ ಸರಳ ಯುಗಾದಿ ಜಾತ್ರೆ : ಸಚಿವ ಸುರೇಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಜಾತ್ರೆ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರರಾಜ್ಯದ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಜಾತ್ರೆ ನಡೆಯುತ್ತದೆ. ಆದರೆ ದೇಶಾದ್ಯಂತ ಹರಡುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಯುಗಾದಿ ಜಾತ್ರೆಗೆ ನಾಡಿನ ಹಾಗೂ ಹೊರರಾಜ್ಯಗಳ ಭಕ್ತರು ಸಾಲು-ಸಾಲಾಗಿ ನಡೆದು ಪಾದಯಾತ್ರೆ ಮೂಲಕ ಬರುವುದು ವಾಡಿಕೆ. ಅವರೆಲ್ಲಾ ರಾತ್ರಿ ವೇಳೆ ರಸ್ತೆಬದಿಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಾರೆ. ಹಾಗೆಯೇ ದೇವಾಲಯದ ಸುತ್ತಮುತ್ತ ಮಲಗಿ ವಿಶ್ರಾಂತಿ ಪಡೆಯುತ್ತಾರೆ. ಆದರೆ ಈ ಬಾರಿ ರಸ್ತೆಬದಿ ಇಲ್ಲವೇ ದೇವಾಲಯದ ಸುತ್ತಮುತ್ತ ಮತ್ತು ಶ್ರೀಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಲಗಲು ಅವಕಾಶ ನಿರಾಕರಿಸಲಾಗಿದೆ. ಹಾಗೆಯೇ ದೇವಾಲಯದ ವಸತಿಗೃಹಗಳಲ್ಲಿಯೂ ಭಕ್ತರ ವಸತಿಗೆ ಅವಕಾಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಜಾತ್ರೆ, ಪರಿಷೆ, ಉತ್ಸವ ಹಾಗೂ ಹೆಚ್ಚು ಜನರು ಸೇರುವ ಮದುವೆಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಮಲೆಮಹದೇಶ್ವರ ಬೆಟ್ಟದ ಯುಗಾದಿ ಜಾತ್ರೆ ನೂರಾರು ವರ್ಷಗಳಿಂದ ನಡೆಯುತ್ತಿರುವುದರಿಂದ ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿರುವುದರಿಂದ ಶ್ರೀಕ್ಷೇತ್ರದಲ್ಲಿ ಆರೋಗ್ಯಕರ ಪರಿಸರ ನಿರ್ಮಾಣ ಮತ್ತು ಯಾವುದೇ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮತ್ತು ಭಕ್ತರ ಹಿತದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ