NEWSಕೃಷಿದೇಶ-ವಿದೇಶನಮ್ಮರಾಜ್ಯ

ಯಾವುದೇ ಕಾರಣಕ್ಕೂ ತ.ನಾಡಿಗೆ ನೀರು ಬಿಡಬಾರದು: ಎಎಪಿ ರಾಜ್ಯಾಧ್ಯಕ್ಷ ಮು.ಚಂದ್ರು ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಮನಗರದ ಎಪಿಎಂಸಿ ಸಭಾಂಗಣದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ಕಾವೇರಿ ನೀರಿನ ಸಮಸ್ಯೆ ಹಾಗೂ ಮೇಕೆದಾಟು ನಿರ್ಮಾಣ ಯೋಜನೆ ಬಗ್ಗೆ ಬುಧವಾರವಾದ ಇಂದು ಸೆ.13ರಂದು ಆಯೋಜಿಸಿದ್ದ ಎರಡನೇ ‘ಚಿಂತನ ಮಂಥನ’ದಲ್ಲಿ ಮಾತನಾಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ. ಅದನ್ನು ನಿಜವಾಗಿಯೂ ಹೇಳಿದ್ದಾರೋ, ಅಥವಾ ನಮ್ಮ ಹೋರಾಟ ನಿಲ್ಲಿಸಲು ಹೇಳಿದ್ದಾರೋ ಗೊತ್ತಿಲ್ಲ ಎಂದು ಕುಟುಕಿದರು.

ರಾಜ್ಯ ಸರ್ಕಾರದ ಮೇಲೆ ಯಾವ ರೀತಿಯ ಒತ್ತಡ ಹಾಕಬೇಕು, ಮುಂದಿನ ಹೋರಾಟ ಹೇಗಿರಬೇಕು. ಬರಿ ಹೋರಾಟದಿಂದ ಮಾತ್ರ ಕೆಲಸ ಆಗುತ್ತದೆಯಾ ಅಥವಾ ನಾವೂ ಕೂಡ ಅರ್ಜಿ ಸಲ್ಲಿಸಲು ಸಾಧ್ಯವಿದೆಯಾ ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಾಜಕಾರಣಿಗಳು ಹೇಳುವುದೊಂದು, ಮಾಡುವುದೊಂದು : ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಆದ್ದರಿಂದ ನಾವು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ದೂರ ಇಟ್ಟಿದ್ದೇವೆ. ನಾನು ದೇವೇಗೌಡರ ಜತೆ ಕೂಡ ಹೋರಾಟ ಮಾಡಿದ್ದೇನೆ. ರಾಜಕಾರಣಿಗಳು ಹೇಳುವುದು ಒಂದು, ಮಾಡುವುದು ಇನ್ನೊಂದು. ಅದಕ್ಕಾಗಿ ಅವರನ್ನು ದೂರ ಇಟ್ಟಿದ್ದೇವೆ ಎಂದರು.

ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡುವಾಗ ನನ್ನನ್ನು ಕರೆದಿದ್ದರು. ಆದರೆ, ನಾನು ಹೋಗಲಿಲ್ಲ. ಆದರೆ, ಅವರೀಗ ರಾಜಕಾರಣಿಯಂತೆ ಮಾತನಾಡುತ್ತಿದ್ದಾರೆ. ಮೇಕೆದಾಟು ಹೋರಾಟ ಅವರದ್ದಲ್ಲ, ಈ ಭಾಗದ ಜನರು ಮೊದಲಿನಿಂದಲೂ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ನೀಡಿರುವ ಆದೇಶವನ್ನು ಸರ್ಕಾರ ಧಿಕ್ಕರಿಸಬೇಕು. ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಆದೇಶ ರದ್ದು ಪಡಿಸುವಂತೆ ಮಾಡಬಹುದಾ ಎಂಬ ಬಗ್ಗೆ ಸರ್ಕಾರ ಚಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

1.20 ಕೋಟಿ ಜನ ಬೆಂಗಳೂರಿನಲ್ಲಿ ಇದ್ದಾರೆ. ಇದರಲ್ಲಿ ಅರ್ಧದಷ್ಟು ಜನರು ಬೇರೆ ರಾಜ್ಯದಿಂದ ಬಂದವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗುವ ಆತಂಕ ಇದ್ದು, ಬೆಂಗಳೂರಿನ ಸಂಘ ಸಂಸ್ಥೆಗಳು ಕೂಡ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲರನ್ನು ಭೇಟಿ ಮಾಡಿ, ರಾಜ್ಯದ ರೈತರ ಸಂಕಷ್ಟ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡುವ ಬಗ್ಗೆ ಸಮಿತಿ ಚಿಂತಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಂಗಕರ್ಮಿ ಕಪ್ಪಣ್ಣ, ಜಲ ತಜ್ಞ ರಾಜಾರಾಂ, ಆಮ್ ಆದ್ಮಿ ಪಕ್ಷದ ಸಂಚಿತ್ ಸೇವಾನಿ, ಸುಷ್ಮಾ ವೀರ್, ಬೈರೇಗೌಡ, ಸೋಸಲೇ ಸಿದ್ದರಾಜು, ಮಾಳವಿಕ, ರೈತ ಮುಖಂಡರಾ ಪುಟ್ಟಸ್ವಾಮಿ, ಕ್ಯಾಪ್ಟನ್ ರಾಜಾರಾವ್, ಡಾ ಪ್ರಕಾಶ್ ಕಮರಡಿ, ಕನ್ನಡ ಸಂಘಟನೆ  ಕುಮಾರಸ್ವಾಮಿ, ಆಂಜನೇಯ ರೆಡ್ಡಿ, ಬೈರೇಗೌಡ, ಹನುಮಾನಹಳ್ಳಿ ಶಿವಕುಮಾರ್ ಸೇರಿದಂತೆ ಇನ್ನಿತರ ಕನ್ನಡಪರ ಸಂಘಟನೆಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು