CrimeNEWSದೇಶ-ವಿದೇಶ

ರಾಜಕೀಯ ಪ್ರೇರಿತ ಸಮನ್ಸ್‌ ಕೂಡಲೇ ಹಿಂಪಡೆಯಿರಿ: ಇಡಿಗೆ ಕೇಜ್ರಿವಾಲ್‌ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನನಗೆ ಇಡಿ ನೀಡಿರುವ  ನೋಟಿಸ್‌ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದ್ದು, ಇದನ್ನು ಕೂಡಲೇ  ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌  ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, ಬಿಜೆಪಿಯ ಒತ್ತಾಯದ ಮೇರೆಗೆ ಇಡಿಯಿಂದ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ಈ ನೋಟಿಸ್ ಕಳುಹಿಸಲಾಗಿದೆ  ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್‌ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್‌ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್‌ ಹಿಂಪಡೆಯಬೇಕು ಎಂದು ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ.

ಕೇಜ್ರಿವಾಲ್ ಅವರು ಬೆಳಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ  ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.

ಯಾರೇ ಆದರೂ ಇ.ಡಿ ಸಮನ್ಸ್‌ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ