NEWSಕೃಷಿನಮ್ಮಜಿಲ್ಲೆ

ರೈತ ಮಕ್ಕಳಿಗೆ ವಿದ್ಯಾನಿಧಿ ಸಹಕಾರಿ: ಶಾಸಕ ಕೆ.ಮಹದೇವ್ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಭಾರತ ಸರ್ಕಾರ ರೈತ ವಿದ್ಯಾನಿಧಿ ಕಾರ್ಯಕ್ರಮದ ಮೂಲಕ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ತಾಲೂಕಿನ ಹುಣಸವಾಡಿ, ಬೆಟ್ಟದಪುರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಡಿಯೋ ಕಾನ್ಪರೆನ್ಸ್ ವೀಕ್ಷಣೆ ಹಾಗೂ ರೈತರಿಗೆ ರಾಗಿ ಬೆಳೆ ಕುರಿತ ಪ್ರಾತಿಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ನಿಟ್ಟಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಹೆಮ್ಮಯ ಸಂಗತಿಯಾಗಿದೆ.

ಆ ಮೂಲಕ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ವಿದ್ಯಾರ್ಥಿ ವೇತನವನ್ನು ಹಸ್ತಾಂತರ ಮಾಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರ ಮಕ್ಕಳು  ಪಡೆದುಕೊಳ್ಳಬೇಕು ಎಂದರು.

ವೈಜ್ಞಾನಿಕವಾಗಿ ರಾಗಿ ಬೆಳೆಯಿರಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ, ರೈತರು ಕೃಷಿಯಲ್ಲಿ ಹಳೆಯ ಪದ್ಧತಿಗಳನ್ನು ಕೈಬಿಟ್ಟು ಆಧುನೀಕ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.

ತಂತ್ರಜ್ಞಾನ ಬೆಳೆದಂತೆ ಕೃಷಿ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು ಮತ್ತು ಬದಲಾವಣೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಉತ್ತಮ ಇಳುವರಿ ಹಾಗೂ ಆರ್ಥಿಕ ಭದ್ರತೆಗಾಗಿ ವೈಜ್ಞಾನಿಕ ಪದ್ದತಿಯಲ್ಲಿ ವ್ಯವಸಾಯದ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಭೂಮಿಯ ಹವಾಗುಣಕ್ಕೆ ಹೊಂದಿಕೊಳ್ಳುವಂತ ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕಗಳನ್ನು  ಸಿಂಪಡಿಸಿ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ರೈತರು ಅಭಿವೃದ್ಧಿ ಹೊಂದಬೇಕು. ಪಿರಿಯಾಪಟ್ಟಣ ತಾಲೂಕಿನಲ್ಲಿ   ಪ್ರತೀ ವರ್ಷ ಹೆಚ್ಚಾಗಿ ರೈತರು ರಾಗಿ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ಆರ್ಥಿಕವಾಗಿ ಸಬಲರಾಗಲು ಮಾರ್ಗೋಪಾಯ ಕಂಡುಕೊಂಡಿರುವುದು ಹೆಮ್ಮಯ ಸಂಗತಿ  ಎಂದರು.

ಕೃಷಿ ಅಧಿಕಾರಿ ಮಹೇಶ್, ವಿಕಾಶ್, ಹಿತೈಶ್, ಧನಂಜಯ್, ಗ್ರಾ.ಪಂ.ಅಧ್ಯಕ್ಷೆ ಸುವರ್ಣ ಗಣೇಶ್, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಮಡರಾದ ಬಿಟಿಎಂ ಅಶೋಕ್, ಶಾಂತೇಗೌಡ, ಗೋವಿಂದೇಗೌಡ, ರಘುನಾಥ್ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು