NEWSನಮ್ಮಜಿಲ್ಲೆನಮ್ಮರಾಜ್ಯ

ರಾತ್ರಿ ಪೂರ ಧರಣಿ ಕುಳಿತ ಸಾರಿಗೆ ನೌಕರರು – ಇಂದಿಗೆ 3ನೇ ದಿನಕ್ಕೆ ಕಾಲಿಟ್ಟ ಹೋರಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಆಯೋಗ ಮಾದರಿಯಲ್ಲಿ ಸರಿ ಸಮಾನ ವೇತನ ಕೊಡುವ ಭರವಸೆ ನೀಡಿದ ಸರ್ಕಾರ ಅದನ್ನು ಜಾರಿ ಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದಿಗೆ (ಮಾ.3) ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಎರಡನೇ ದಿನದ ಧರಣಿ ಪೂರ್ಣಗೊಂಡ ಬಳಿಕ ಧರಣಿ ಸ್ಥಳದಲ್ಲೇ ಊಟ ಮಾಡಿ ರಾತ್ರಿ ಪೂರ ಸೊಳ್ಳೆ ಪರದೆ ಮತ್ತು ಹೊದಿಕೆಯನ್ನು ಹೊದ್ದುಕೊಂಡು ನೌಕರರು ಹಿಡಿ ರಾತ್ರಿಯನ್ನು ಓಪನ್‌ ಸ್ಥಳದಲ್ಲಿ ಗಾಳಿ ಚಳಿಯ ನಡುವೆಯೇ ಕಳೆದರು.

ಇನ್ನು ಇಂದು ಧರಣಿಯನ್ನು ಬೇರೆ ರೂಪಕ್ಕೆ ತೆಗೆದುಕೊಂಡು ಹೋಗುವ ಸಲುವಾಗಿ ವೇದಿಕೆ ಪದಾಧಿಕಾರಿಗಳ ತುರ್ತು ಸಭೆ ಕರೆದು ಚರ್ಚೆ ನಡೆಸಲು ಮುಂದಾಗಿದೆ. ಈ ಸಭೆಯ ಬಳಿಕ ಏನು ಕ್ರಮ ತೆಗೆದಕೊಳ್ಳಲಾಗಿದೆ ಎಂಬುದರ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಈ ನಡುವೆ ಮಾ.2ರಂದು ನೂರಾರು ಮಂದಿ ನೌಕರರು ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಆಗಮಿಸಿ ಧರಣಿಯನ್ನು ಬೆಂಬಲಿಸಿದ್ದಾರೆ. ಇದಿಷ್ಟೇ ಅಲ್ಲದೆ ನೌಕರರ ಕುಟುಂಬ ಸದಸ್ಯರೂ ಕೂಡ ಈ ಧರಣಿಯಲ್ಲಿ ನಿರತರಾಗಿದ್ದು ಸರ್ಕಾರ ಮತ್ತು ಸಾರಿಗೆ ನಿಗಮದ ಆಡಳಿತ ಮಂಡಳಿ ಬೇಡಿಕೆಯನ್ನು ಈಡೇರಿಸಲೇಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸರ್ಕಾರ 2020ರ ಡಿಸೆಂಬರ್‌ನಲ್ಲಿ ಲಿಖಿತವಾಗಿ ಕೊಟ್ಟಿರುವ ಭರವಸೆ ಈಡೇರಿಸದೆ ಮಾತು ತಪ್ಪಿದ್ದರಿಂದ ವಿಧಿ ಇಲ್ಲದೆ 2021ರ ಏಪ್ರಿಲ್‌ನಲ್ಲಿ ಮುಷ್ಕರ ಮಾಡಬೇಕಾಯಿತು. ಮತ್ತೆ ಅದೇ ರೀತಿ ಈವರೆಗೂ ಸರ್ಕಾರ ಉದಾಸೀನತೆಯಿಂದ ಜವಾಬ್ದಾರಿ ಮರೆತು ನೌಕರರ ವಿಷಯದಲ್ಲಿ ನಡೆದುಕೊಳ್ಳುತ್ತಿದೆ. ಈಗಲಾದರೂ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿ ಧರಣಿ ಮುಂದುವರಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು