CrimeNEWSನಮ್ಮರಾಜ್ಯರಾಜಕೀಯ

ರಾತ್ರಿಯಿಡಿ ಸಚಿವ ಶ್ರೀರಾಮುಲು ಆಪ್ತನ ವಿಚಾರಣೆ: ಕೆಂಡಮಂಡಲರಾದ ಶ್ರೀ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ, ಸಿಎಂ ಬಿಎಸ್‌ವೈ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೆಸರು ಬಳಸಿ ಹಲವರಿಗೆ ಕೆಲಸಕೊಡಿಸುವ ಮತ್ತು ವರ್ಗಾವಣೆ ಮಾಡಿಸುತ್ತೇನೆ ಎಂದು ವಂಚನೆ ಎಸಗಿದ್ದ ಆರೋಪದ ಮೇಲೆ ಗುರುವಾಋ ರಾತ್ರಿ ವಶಕ್ಕೆ ಪಡೆಯಲಾಗಿದ್ದ ಸಚಿವ ಬಿ.ಶ್ರೀರಾಮು ಪಿಎ ರಾಜಣ್ಣ ಅವರನ್ನು ಸಿಸಿಬಿ ಪೊಲೀಸರು ರಾತ್ರಿಯಿಡೀ ವಿಚಾರಣೆ ನಡೆಸಿದರು.

ಆಡುಗೋಡಿ ಟೆಕ್ನಿಕಲ್ ಸೆಲ್​ನಲ್ಲಿ ಬೆಳಗಿನ ಜಾವ 5ಗಂಟೆಯವರೆಗೂ ಶ್ರೀರಾಮುಲು ಆಪ್ತ ರಾಜಣ್ಣನ ವಿಚಾರಣೆ ನಡೆಯಿತು. ಈ ವೇಳೆ ಹಲವು ಮಾಹಿತಿಯನ್ನು ಸಿಸಿಬಿ ಪೊಲೀಸರು ಸಂಗ್ರಹಿಸಿದರು. ವಂಚನೆ ಎಸಗಿರುವುದಕ್ಕೆ ಸಾಕ್ಷ್ಯವಾಗಿ ನೀಡಲಾಗಿದ್ದ ಫೋನ್ ಸಂಭಾಷಣೆಯ ತುಣುಕು, ರಾಜಣ್ಣನ ಈಗಿನ ಧ್ವನಿ ಮಾದರಿಯನ್ನು ಪಡೆದ ಸಿಸಿಬಿ ಪೊಲೀಸರು ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

34 ವರ್ಷದ ರಾಜಣ್ಣ ತನ್ನ ಹೆಸರು ಹೇಳಿಕೊಂಡು ಹಲವರಿಗೆ ವಂಚನೆ ಎಸಗಿದ್ದಾರೆಂದು ವಿಜಯೇಂದ್ರ ಅವರೇ ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಮೂವರ ಜತೆ ಫೋನ್​ನಲ್ಲಿ ಮಾತನಾಡಿರುವ ಕುರಿತು ಸಾಕ್ಷ್ಯ, ಟೆಂಡರ್ ಬಿಲ್ ಸ್ಯಾಂಕ್ಷನ್ ಬಗ್ಗೆ ಮಾತನಾಡಿರುವ ಆಡಿಯೋ ಕ್ಲಿಪ್ ಹೀಗೆ ಕೆಲವು ಸಾಕ್ಷ್ಯಗಳನ್ನ ವಿಜಯೇಂದ್ರ ಸಂಗ್ರಹಿಸಿ ಪೊಲೀಸರಿಗೆ ನೀಡಿದ್ದರು.

ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ರಾಜಣ್ಣನ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಮೊಬೈಲ್​ನಲ್ಲಿ ರಾಜಣ್ಣ ಸಂಪರ್ಕ ನಡೆಸಿದ ಹಲವರ ಬಗ್ಗೆ ಫೋನ್ ಕರೆ, ವಾಟ್ಸಪ್ ಚಾಟಿಂಗ್ ಸೇರಿ ಹಲವು ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ರಾಜಣ್ಣನ ಸಂಪರ್ಕದಲ್ಲಿದ್ದ ಕೆಲವರು ತಮ್ಮ ಬಗ್ಗೆ ಉಲ್ಲೇಖ ಮಾಡದಂತೆ ಸಿಸಿಬಿ ಪೊಲೀಸರಿಗೆ ಮನವಿ ಮಾಡಿಕೊಂಡಿರುವುದು ತಿಳಿದುಬಂದಿದೆ.

ಶ್ರೀರಾಮುಲು ಬೇಸರ
ಈ ಪ್ರಕರಣದ ಒಟ್ಟಾರೆ ಬೆಳವಣಿಗೆ ಬಗ್ಗೆ ಸಚಿವ ಶ್ರೀರಾಮುಲು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ರಾಜು ತನಗೆ ಗೊತ್ತಿರುವ ಹುಡುಗನಾಗಿದ್ದಾನೆ. ಮೊದಲೇ ನನ್ನ ಗಮನಕ್ಕೆ ತಂದಿದ್ದರೆ ರಾಜುವನ್ನು ಕೂರಿಸಿ ವಿಚಾರಿಸುತ್ತಿದ್ದೆ. ಈ ಪ್ರಕಣದಲ್ಲಿ ಏನಾಗಿದೆ ಅಂತ ನನಗೆ ಗೊತ್ತಿಲ್ಲ ಎಂದು ತಮ್ಮ ಆಪ್ತರ ಜತೆ ಶ್ರೀರಾಮುಲು ಹೇಳಿಕೊಂಡು  ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ರಾಜು ಅಧಿಕೃತವಾಗಿ ನನ್ನ ಬಳಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಪ್ಪಿತಸ್ಥರನ್ನು ಕಾಪಾಡುವ ವ್ಯಕ್ತಿ ನಾನಲ್ಲ. ತನಿಖೆ ಆಗಿ ನಂತರ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ಈಗ ತನಿಖೆ ನಡೆಯುವ ಸಮಯದಲ್ಲಿ ನಾನು ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸುದ್ದಿಗಾರರಿಗೆ ಶ್ರೀರಾಮುಲು ತಿಳಿಸಿದರು.

ಇನ್ನು, ಇವತ್ತು ವಿಧಾನಸೌಧದಲ್ಲಿ ಸಿಎಂ ಕಚೇರಿ ಮುಂದೆ ಬಂದರೂ ಶ್ರೀರಾಮುಲು ಅತ್ತ ತಿರುಗಿ ನೋಡದೇ ಹೋಗಿದ್ದು, ತೀವ್ರ ಕುತೂಹಲ ಮೂಡಿಸಿತು. ಸಿಎಂ ಕೊಠಡಿಯ ಮುಂದೆಯೇ ಹಾದು ಹೋಗಿ ತಮ್ಮ ಕೊಠಡಿ ಸೇರಿದರು. ಆದರೆ, ಸಿಎಂ ಭೇಟಿ ಮಾಡುತ್ತೀರಾ ಎಂದು ಸುದ್ದಿಗಾರರು ಕೇಳಿದಾಗ, ರೀ ಇವಾಗ ಪರಿಷತ್ ಸಭೆ ಇದೆ ಎಂದು ಕೆರಳಿ ಕೆಂಡವಾದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು