NEWSನಮ್ಮರಾಜ್ಯಸಂಸ್ಕೃತಿ

ರಾಷ್ಟ್ರಕವಿ ಕುವೆಂಪು ಸಮಾಜದ ಅಸಮಾನತೆ ಅಳಿಸಲು ಶ್ರಮಿಸಿದರು: ಅಭಿಲಾಷ್ ಗೌಡ

ವಿಜಯಪಥ ಸಮಗ್ರ ಸುದ್ದಿ

ಹನೂರು: ರಾಷ್ಟ್ರಕವಿ ಕುವೆಂಪು ಅವರು ಕವಿತೆ, ಕವನಗಳ ಮೂಲಕ ಸಮಾಜದ ಅಸಮಾನತೆಯನ್ನು ಅಳಿಸಿ ಹಾಕಲು ಶ್ರಮಿಸಿದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಷ್ ಗೌಡ ಅಭಿಪ್ರಾಯಪಟ್ಟರು.

ಗುರುವಾರ ಪಟ್ಟಣದಲ್ಲಿ ಒಕ್ಕಲಿಗ ಯುವಕರ ಬಳಗ ಹಾಗೂ ಆಟೋ ಚಾಲಕರ ಸಮ್ಮುಖದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸಿ‌ ಗೌರವ ಅರ್ಪಿಸಿ ಮಾತನಾಡಿದರು.

ಕುವೆಂಪು ಅವರನ್ನು ಒಂದು ಜಾತಿಗಷ್ಟೇ ಸೀಮಿತಗೊಳಿಸದೆ ಜಾತ್ಯತಿತವಾಗಿ ನೋಡಬೇಕು. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು.

ಪಟ್ಟಣ ಪಂಚಾಯಿತಿ ಉಪಾದ್ಯಕ್ಷ ಗಿರೀಶ್, ಮುಖಂಡರಾದ ಸಿದ್ದೇ ಗೌಡ, ಸಿದ್ದರಾಜು, ಸಿದ್ದರಾಜು, ಜಡೆಸ್ವಾಮಿ, ನಾರಾಯಣ್ ಪ್ರಭು ದೇಶೆಗೌಡ, ಸಲ್ಲು‌, ಮಂಜು ರಾಜು, ವೆಂಕಟೇಶ್, ಭರತ್ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ