NEWSನಮ್ಮರಾಜ್ಯ

ಲಾಕ್‌ಡೌನ್‌ ಅವಧಿಯಲ್ಲಿ ಗೈರಾದ ನೌಕರರಿಗೂ ವೇತನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ವೇತನ ತಡೆಹಿಡಿಯ ಬಾರದು ಎಂದು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಕಳೆದ ಮಾರ್ಚ್‌ನಿಂದ  ಉಂಟಾದ ಲಾಕ್ ಡೌನ್ ಅವಧಿಯ ವೇತನ ತಡೆ ಹಿಡಿಯುವಂತಿಲ್ಲ  ಎಂದು ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಎಚ್. ಶೋಭಾ ಸುತ್ತೋಲೆ ಹೊರಡಿಸಿದ್ದಾರೆ.

ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಲಾಕ್ ಡೌನ್ ಜಾರಿಯಲ್ಲಿತ್ತು ಈ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ.

ಇದೇ ಕಾರಣಕ್ಕೆ ಕೆಲವು ಇಲಾಖೆಗಳಲ್ಲಿ ಗೈರಾದ ಅವಧಿಯಲ್ಲಿ ವೇತನ ಪಾವತಿ ನಿರಾಕರಿಸಲಾಗಿದೆ. ಅದನ್ನು ಗಮನಿಸಿದ ರಾಜ್ಯ ಸರಕಾರ ಇದೀಗ ಸುತ್ತೋಲೆ ಹೊರಡಿಸಿ ಕೇಂದ್ರ ಸರ್ಕಾರದ ಅಧಿಕೃತ ಜ್ಞಾಪನ ಪತ್ರದ ಪ್ರಕಾರ ವೇತನ ತಡೆ ಹಿಡಿಯದೆ ಪಾವತಿಸಬೇಕೆಂದು ನಿರ್ದೇಶನ ನೀಡಿದೆ.

ಇದಕ್ಕೂ ಮೊದಲು ರಾಜ್ಯದ ವಿವಿಧೆಡೆ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪರಿಶೀಲಿಸಿದ ಸರ್ಕಾರ ಎಲ್ಲರಿಗೂ ವೇತನ ನೀಡುವಂತೆ ಆದೇಶ ಹೊರಡಿಸಿದ್ದು, ಇದರಿಂದ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು